<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ, ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ಕನ್ಯಾಡಿ ಬಳಿ ಹೊಸ ಜಾಗವನ್ನು ಗುರುವಾರ ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ಮುಂದುವರಿದಿದೆ. </p><p>ನೇತ್ರಾವತಿ ನದಿ ಪಕ್ಕದಲ್ಲಿರುವ ಈ ಜಾಗಕ್ಕೆ ಖಾಸಗಿ ಅಡಿಕೆ ತೋಟವೊಂದರ ಮೂಲಕ ಸಾಗಬೇಕಿದೆ. ಉಜಿರೆ– ಧರ್ಮಸ್ಥಳ ರಸ್ತೆಯಿಂದ ಸುಮಾರು 1 ಕಿ.ಮೀ ದೂರವನ್ನು ಕಿರಿದಾದ ರಸ್ತೆಯಲ್ಲಿ ಕ್ರಮಿಸಿ ಈ ಜಾಗವನ್ನು ತಲುಪಬೇಕಿದೆ.ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ ಇನ್ನೊಂದು ಬದಿಯಲ್ಲಿ ಈ ಜಾಗ ಇದೆ. ಎಸ್ಐಟಿ ಸಿಬ್ಬಂದಿ ಸಾಕ್ಷಿ ದೂರುದಾರ ಜೊತೆಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಾಗವನ್ನು ತಲುಪಿದರು.</p><p>ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಹಾಗೂ ನೆಲ ಅಗೆಯುವ ಕಾರ್ಮಿಕರು ಸ್ಥಳಕ್ಕೆ ತೆರಳಿದ್ದಾರೆ. ನೆಲವನ್ನು ಅಗೆಯುವ ಯಂತ್ರವನ್ನೂ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಈ ಜಾಗಕ್ಕೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. </p><p>ಸಾಕ್ಷಿ ದೂರುದಾರ ಇದುವರೆಗೆ ಶವಗಳನ್ನು ಹೂತಿರುವುದಾಗಿ ಹೇಳಿ 17 ಜಾಗಗಳನ್ನು ತೋರಿಸಿದ್ದಾನೆ. ಅವುಗಳಲ್ಲಿ ಶೋಧ ಕಾರ್ಯ ನಡೆಸಿದಾಗ ಎರಡು ಕಡೆ ಮೃತದೇಹದ ಅವಶೇಷಗಳು ಪತ್ತೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ, ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ಕನ್ಯಾಡಿ ಬಳಿ ಹೊಸ ಜಾಗವನ್ನು ಗುರುವಾರ ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ಮುಂದುವರಿದಿದೆ. </p><p>ನೇತ್ರಾವತಿ ನದಿ ಪಕ್ಕದಲ್ಲಿರುವ ಈ ಜಾಗಕ್ಕೆ ಖಾಸಗಿ ಅಡಿಕೆ ತೋಟವೊಂದರ ಮೂಲಕ ಸಾಗಬೇಕಿದೆ. ಉಜಿರೆ– ಧರ್ಮಸ್ಥಳ ರಸ್ತೆಯಿಂದ ಸುಮಾರು 1 ಕಿ.ಮೀ ದೂರವನ್ನು ಕಿರಿದಾದ ರಸ್ತೆಯಲ್ಲಿ ಕ್ರಮಿಸಿ ಈ ಜಾಗವನ್ನು ತಲುಪಬೇಕಿದೆ.ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ ಇನ್ನೊಂದು ಬದಿಯಲ್ಲಿ ಈ ಜಾಗ ಇದೆ. ಎಸ್ಐಟಿ ಸಿಬ್ಬಂದಿ ಸಾಕ್ಷಿ ದೂರುದಾರ ಜೊತೆಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಾಗವನ್ನು ತಲುಪಿದರು.</p><p>ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಹಾಗೂ ನೆಲ ಅಗೆಯುವ ಕಾರ್ಮಿಕರು ಸ್ಥಳಕ್ಕೆ ತೆರಳಿದ್ದಾರೆ. ನೆಲವನ್ನು ಅಗೆಯುವ ಯಂತ್ರವನ್ನೂ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಈ ಜಾಗಕ್ಕೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. </p><p>ಸಾಕ್ಷಿ ದೂರುದಾರ ಇದುವರೆಗೆ ಶವಗಳನ್ನು ಹೂತಿರುವುದಾಗಿ ಹೇಳಿ 17 ಜಾಗಗಳನ್ನು ತೋರಿಸಿದ್ದಾನೆ. ಅವುಗಳಲ್ಲಿ ಶೋಧ ಕಾರ್ಯ ನಡೆಸಿದಾಗ ಎರಡು ಕಡೆ ಮೃತದೇಹದ ಅವಶೇಷಗಳು ಪತ್ತೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>