<p><strong>ಮಂಗಳೂರು</strong>: ಧರ್ಮಸ್ಥಳದಲ್ಲಿ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು, ಗ್ರಾಮದಲ್ಲಿ ಅಸಹಜವಾಗಿ ಸಾವಿಗೀಡಾಗಿದ್ದವರ ಮೃತದೇಹಗಳನ್ನು ಸಾಗಿಸಲು ನೆರವಾಗಿದ್ದರು ಎನ್ನಲಾದ ಇಬ್ಬರು ಆಂಬುಲೆನ್ಸ್ ಚಾಲಕರನ್ನು ಶನಿವಾರ ವಿಚಾರಣೆಗೆ ಒಳಪಡಿಸಿದರು. </p>.<p>ಬೆಳ್ತಂಗಡಿಯ ಜಲೀಲ್ ಹಾಗೂ ಹಮೀದ್ ಎಸ್ಐಟಿಯಿಂದ ವಿಚಾರಣೆಗೆ ಒಳಗಾದ ಆಂಬುಲೆನ್ಸ್ ಚಾಲಕರು. </p>.<p>ಎಸ್ಐಟಿ ಕಚೇರಿಯಿಂದ ಹೊರ ಬಂದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಲೀಲ್, ‘ನಾನು ಬೆಳ್ತಂಗಡಿಯಲ್ಲಿ 21 ವರ್ಷಗಳಿಂದ ಆಂಬುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ಕೇಳಿದರು’ ಎಂದರು.</p>.<p>‘ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ಪೊಲೀಸರು ನನಗೆ ಕರೆ ಮಾಡುತ್ತಿದ್ದರು. ಆತ್ಮಹತ್ಯೆ, ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟರು, ವಯೋಸಹಜವಾಗಿ ಸತ್ತವರ ಹಾಗೂ ಗುರುತು ಪತ್ತೆಯಾಗದ ಮೃತದೇಹಗಳನ್ನು ನಾನು ಸಾಗಿಸಿದ್ದೆ’ ಎಂದು ತಿಳಿಸಿದರು. </p>.<p>‘ತನಿಖೆ ಈಗಲೂ ಪ್ರಗತಿಯಲ್ಲಿದೆ. ಇನ್ನು ಮುಂದೆಯೂ ನೋಟಿಸ್ ನೀಡಿದಾಗ ವಿಚಾರಣೆಗೆ ಹಾಜರಾಗಬೇಕಾಗುತ್ತದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಅವರು ಹೇಳಿದರು. </p>.<p class="Subhead">ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮನೆಯಲ್ಲಿ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಎರಡೂ ಕಡೆಯವರ ವಾದವನ್ನು ಆಲಿಸಿದ್ದಾರೆ. ಈ ಅರ್ಜಿ ಕುರಿತು ಇದೇ 9ರಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಮರೋಡಿ ಪರ ವಾದಿಸಿದ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ತಿಳಿಸಿದ್ದಾರೆ.</p>.<p>ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿದ್ದ 13 ಪ್ರಕರಣಗಳು ಈಗಾಗಲೇ ಇತ್ಯರ್ಥವಾಗಿವೆ. ಒಂದು ಪ್ರಕರಣದಲ್ಲಿ ಮಾತ್ರ ಅವರಿಗೆ ದಂಡ ವಿಧಿಸಲಾಗಿದೆ. 11 ಪ್ರಕರಣಗಳು ಇನ್ನಷ್ಟೇ ಇತ್ಯರ್ಥವಾಗಬೇಕಿವೆ. ಎರಡು ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. </p>.<p>‘ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ತಿಮರೋಡಿ ಮನೆಯಲ್ಲಿ ಆಶ್ರಯ ಪಡೆದಿದ್ದ ಕುರಿತು ಎಸ್ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದ. ಎಸ್ಐಟಿ ಅಧಿಕಾರಿಗಳು ಶೋಧನಾ ವಾರಂಟ್ ಪಡೆದು ತಿಮರೋಡಿ ಮನೆಯಲ್ಲಿ ಶೋಧ ನಡೆಸಿದ್ದಾಗ 2 ತಲವಾರು 1 ಬಂದೂಕು ಸೇರಿ 44 ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳದಲ್ಲಿ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು, ಗ್ರಾಮದಲ್ಲಿ ಅಸಹಜವಾಗಿ ಸಾವಿಗೀಡಾಗಿದ್ದವರ ಮೃತದೇಹಗಳನ್ನು ಸಾಗಿಸಲು ನೆರವಾಗಿದ್ದರು ಎನ್ನಲಾದ ಇಬ್ಬರು ಆಂಬುಲೆನ್ಸ್ ಚಾಲಕರನ್ನು ಶನಿವಾರ ವಿಚಾರಣೆಗೆ ಒಳಪಡಿಸಿದರು. </p>.<p>ಬೆಳ್ತಂಗಡಿಯ ಜಲೀಲ್ ಹಾಗೂ ಹಮೀದ್ ಎಸ್ಐಟಿಯಿಂದ ವಿಚಾರಣೆಗೆ ಒಳಗಾದ ಆಂಬುಲೆನ್ಸ್ ಚಾಲಕರು. </p>.<p>ಎಸ್ಐಟಿ ಕಚೇರಿಯಿಂದ ಹೊರ ಬಂದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಲೀಲ್, ‘ನಾನು ಬೆಳ್ತಂಗಡಿಯಲ್ಲಿ 21 ವರ್ಷಗಳಿಂದ ಆಂಬುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ಕೇಳಿದರು’ ಎಂದರು.</p>.<p>‘ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ಪೊಲೀಸರು ನನಗೆ ಕರೆ ಮಾಡುತ್ತಿದ್ದರು. ಆತ್ಮಹತ್ಯೆ, ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟರು, ವಯೋಸಹಜವಾಗಿ ಸತ್ತವರ ಹಾಗೂ ಗುರುತು ಪತ್ತೆಯಾಗದ ಮೃತದೇಹಗಳನ್ನು ನಾನು ಸಾಗಿಸಿದ್ದೆ’ ಎಂದು ತಿಳಿಸಿದರು. </p>.<p>‘ತನಿಖೆ ಈಗಲೂ ಪ್ರಗತಿಯಲ್ಲಿದೆ. ಇನ್ನು ಮುಂದೆಯೂ ನೋಟಿಸ್ ನೀಡಿದಾಗ ವಿಚಾರಣೆಗೆ ಹಾಜರಾಗಬೇಕಾಗುತ್ತದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಅವರು ಹೇಳಿದರು. </p>.<p class="Subhead">ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮನೆಯಲ್ಲಿ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಎರಡೂ ಕಡೆಯವರ ವಾದವನ್ನು ಆಲಿಸಿದ್ದಾರೆ. ಈ ಅರ್ಜಿ ಕುರಿತು ಇದೇ 9ರಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಮರೋಡಿ ಪರ ವಾದಿಸಿದ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ತಿಳಿಸಿದ್ದಾರೆ.</p>.<p>ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿದ್ದ 13 ಪ್ರಕರಣಗಳು ಈಗಾಗಲೇ ಇತ್ಯರ್ಥವಾಗಿವೆ. ಒಂದು ಪ್ರಕರಣದಲ್ಲಿ ಮಾತ್ರ ಅವರಿಗೆ ದಂಡ ವಿಧಿಸಲಾಗಿದೆ. 11 ಪ್ರಕರಣಗಳು ಇನ್ನಷ್ಟೇ ಇತ್ಯರ್ಥವಾಗಬೇಕಿವೆ. ಎರಡು ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. </p>.<p>‘ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ತಿಮರೋಡಿ ಮನೆಯಲ್ಲಿ ಆಶ್ರಯ ಪಡೆದಿದ್ದ ಕುರಿತು ಎಸ್ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದ. ಎಸ್ಐಟಿ ಅಧಿಕಾರಿಗಳು ಶೋಧನಾ ವಾರಂಟ್ ಪಡೆದು ತಿಮರೋಡಿ ಮನೆಯಲ್ಲಿ ಶೋಧ ನಡೆಸಿದ್ದಾಗ 2 ತಲವಾರು 1 ಬಂದೂಕು ಸೇರಿ 44 ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>