<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ವೇಳೆ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿರುವ ಬಂಗ್ಲೆಗುಡ್ಡೆ ಕಾಡಿನಲ್ಲಿ ಮೃತದೇಹದ ಅವಶೇಷಗಳು ನೆಲದ ಮೇಲೆಯೇ ಪತ್ತೆಯಾದ ಜಾಗದಲ್ಲಿ ಮಂಗಳವಾರ ಮತ್ತೆ ಪರಿಶೀಲನೆ ನಡೆದಿದೆ. </p>.<p>ಕೆಲ ಅಧಿಕಾರಿಗಳು ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿ ಬಂಗ್ಲೆಗುಡ್ಡೆ ಕಾಡಿನತ್ತ ತೆರಳಿದರು. ಅಲ್ಲಿ ಅಳತೆ ಕಾರ್ಯ ನಡೆಸಿ ಸುಮಾರು ಅರ್ಧ ಗಂಟೆ ಬಳಿಕ ಕಾಡಿನಿಂದ ಮರಳಿದರು. </p>.<p>‘ಬಂಗ್ಲೆಗುಡ್ಡೆ ಕಾಡಿನಲ್ಲಿ ಏಳು ತಲೆ ಬುರುಡೆಗಳು ಸೇರಿದಂತೆ ಮೃತದೇಹಗಳ ಅವಶೇಷ ಪತ್ತೆಯಾಗಿದ್ದ ಜಾಗದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮ್ಯಾಪಿಂಗ್ ನಡೆಸಿದ್ದಾರೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಪ್ರಕರಣದ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆ ಪರಿಶೀಲನೆ ವೇಳೆ ಎರಡು ತಲವಾರು ಹಾಗೂ ಬಂದೂಕು ಪತ್ತೆಯಾದ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.</p>.<p>ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಿತು. ಮಹೇಶ್ ಶೆಟ್ಟಿಗೆ ಜಾಮೀನು ನೀಡುವುದಕ್ಕೆ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಿದರು. </p>.<p>ಮಹೇಶ್ ಶೆಟ್ಟಿ ಪರ ವಾದ ಮಂಡಿಸಿದ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ, ‘ದಾಖಲಾದ ಈ ದೂರಿನ ಸಂಬಂಧ ಪುರಾವೆಗಳನ್ನೂ ಒದಗಿಸಲಾಗಿಲ್ಲ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪೂರ್ತಿ ವಿವರಗಳನ್ನು ನೀಡಿಲ್ಲ’ ಎಂದು ಹೇಳಿದರು.</p>.<p>ಪತ್ತೆ ಆದ ಶಸ್ತ್ರಾಸ್ತ್ರಕ್ಕೆ ಸಂಬಂಧಿಸಿದ ಇಂತಹ ವಿವರಗಳು, ಅವು ಶಸ್ತ್ರಾಸ್ತ್ರ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ವಾದಿಸಿದರು.</p>.<p>‘ಕೆಲ ಆಯುಧಗಳಿಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಗಿ ಪಡೆಯುವ ಅಗತ್ಯವಿಲ್ಲ. ಪತ್ತೆ<br>ಯಾದ ಶಸ್ತ್ರಗಳ ಸಮಗ್ರ ವಿವರಣೆ ನೀಡದೇ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿಕೊಳ್ಳುವಂತಿಲ್ಲ. ಶಸ್ತ್ರಾಸ್ತ್ರಗಳು ದೋಷಪೂರಿತವಾಗಿದ್ದರೆ ಅಥವಾ ಬಳಕೆಗೆ ಯೋಗ್ಯವಲ್ಲದಿದ್ದರೆ, ಎಫ್ಐಆರ್ ದಾಖಲಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ. ಈ ಅಪರಾಧಕ್ಕೆ ಎರಡರಿಂದ ಏಳು ವರ್ಷಗಳವರೆಗೆ ಮಾತ್ರ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗಾಗಿ ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಅವರಿಗೆ ಜಾಮೀನು ಮಂಜೂರು ಮಾಡಬಹುದು’ ಎಂದು ಅವರು ವಾದಿಸಿದರು.</p>.<p>ಸರ್ಕಾರಿ ವಕೀಲರು ಸಮಯಾವಕಾಶ ಕೋರಿದ್ದರಿಂದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರು ಅ.4ಕ್ಕೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ವೇಳೆ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿರುವ ಬಂಗ್ಲೆಗುಡ್ಡೆ ಕಾಡಿನಲ್ಲಿ ಮೃತದೇಹದ ಅವಶೇಷಗಳು ನೆಲದ ಮೇಲೆಯೇ ಪತ್ತೆಯಾದ ಜಾಗದಲ್ಲಿ ಮಂಗಳವಾರ ಮತ್ತೆ ಪರಿಶೀಲನೆ ನಡೆದಿದೆ. </p>.<p>ಕೆಲ ಅಧಿಕಾರಿಗಳು ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿ ಬಂಗ್ಲೆಗುಡ್ಡೆ ಕಾಡಿನತ್ತ ತೆರಳಿದರು. ಅಲ್ಲಿ ಅಳತೆ ಕಾರ್ಯ ನಡೆಸಿ ಸುಮಾರು ಅರ್ಧ ಗಂಟೆ ಬಳಿಕ ಕಾಡಿನಿಂದ ಮರಳಿದರು. </p>.<p>‘ಬಂಗ್ಲೆಗುಡ್ಡೆ ಕಾಡಿನಲ್ಲಿ ಏಳು ತಲೆ ಬುರುಡೆಗಳು ಸೇರಿದಂತೆ ಮೃತದೇಹಗಳ ಅವಶೇಷ ಪತ್ತೆಯಾಗಿದ್ದ ಜಾಗದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮ್ಯಾಪಿಂಗ್ ನಡೆಸಿದ್ದಾರೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಪ್ರಕರಣದ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆ ಪರಿಶೀಲನೆ ವೇಳೆ ಎರಡು ತಲವಾರು ಹಾಗೂ ಬಂದೂಕು ಪತ್ತೆಯಾದ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.</p>.<p>ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಿತು. ಮಹೇಶ್ ಶೆಟ್ಟಿಗೆ ಜಾಮೀನು ನೀಡುವುದಕ್ಕೆ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಿದರು. </p>.<p>ಮಹೇಶ್ ಶೆಟ್ಟಿ ಪರ ವಾದ ಮಂಡಿಸಿದ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ, ‘ದಾಖಲಾದ ಈ ದೂರಿನ ಸಂಬಂಧ ಪುರಾವೆಗಳನ್ನೂ ಒದಗಿಸಲಾಗಿಲ್ಲ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಪೂರ್ತಿ ವಿವರಗಳನ್ನು ನೀಡಿಲ್ಲ’ ಎಂದು ಹೇಳಿದರು.</p>.<p>ಪತ್ತೆ ಆದ ಶಸ್ತ್ರಾಸ್ತ್ರಕ್ಕೆ ಸಂಬಂಧಿಸಿದ ಇಂತಹ ವಿವರಗಳು, ಅವು ಶಸ್ತ್ರಾಸ್ತ್ರ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ವಾದಿಸಿದರು.</p>.<p>‘ಕೆಲ ಆಯುಧಗಳಿಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಗಿ ಪಡೆಯುವ ಅಗತ್ಯವಿಲ್ಲ. ಪತ್ತೆ<br>ಯಾದ ಶಸ್ತ್ರಗಳ ಸಮಗ್ರ ವಿವರಣೆ ನೀಡದೇ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿಕೊಳ್ಳುವಂತಿಲ್ಲ. ಶಸ್ತ್ರಾಸ್ತ್ರಗಳು ದೋಷಪೂರಿತವಾಗಿದ್ದರೆ ಅಥವಾ ಬಳಕೆಗೆ ಯೋಗ್ಯವಲ್ಲದಿದ್ದರೆ, ಎಫ್ಐಆರ್ ದಾಖಲಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ. ಈ ಅಪರಾಧಕ್ಕೆ ಎರಡರಿಂದ ಏಳು ವರ್ಷಗಳವರೆಗೆ ಮಾತ್ರ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗಾಗಿ ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಅವರಿಗೆ ಜಾಮೀನು ಮಂಜೂರು ಮಾಡಬಹುದು’ ಎಂದು ಅವರು ವಾದಿಸಿದರು.</p>.<p>ಸರ್ಕಾರಿ ವಕೀಲರು ಸಮಯಾವಕಾಶ ಕೋರಿದ್ದರಿಂದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರು ಅ.4ಕ್ಕೆ ಮುಂದೂಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>