<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ<strong> </strong>ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿದೂರುದಾರನ್ನು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಂಗಳವಾರ ಪೊಲೀಸರು ಹಾಜರುಪಡಿಸಿದರು.</p>.ಧರ್ಮಸ್ಥಳ ಪ್ರಕರಣ | ಸಿಕ್ಕಿದ್ದು ಪುರುಷರ ಬುರುಡೆ: ಎಸ್ಐಟಿ ಮೂಲಗಳಿಂದ ಮಾಹಿತಿ.<p>ಪ್ರಕರಣದ ಕುರಿತಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 183ರ ಅಡಿ ನ್ಯಾಯಾಲಯದಲ್ಲಿ ಸ್ವಯಂಪ್ರೇರಿತವಾಗಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಆತನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಪ್ರಕರಣ ಸಂಬಂಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಸಾಕ್ಷಿ ದೂರುದಾರ, ‘ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದ ಅವಶೇಷವಿದು’ ಎಂದು ಹೇಳಿ ತಲೆಬುರುಡೆಯನ್ನೂ ಒಪ್ಪಿಸಿದ್ದ. ವಿಶೇಷ ತನಿಖಾ ತಂಡವು (ಎಸ್ಐಟಿ) ಈ ಬಗ್ಗೆ ವಿಚಾರಣೆ ನಡೆಸಿದಾಗ ತಲೆಬುರುಡೆಯನ್ನು ನೆಲದಿಂದ ಹೊರತೆಗೆದ ಜಾಗ ತೋರಿಸಲು ಮೀನಮೇಷ ಎಣಿಸಿದ್ದ. ಬಳಿಕ ಅದನ್ನು ತಾನು ಹೊರತೆಗೆದಿಲ್ಲ ಎಂದು ಹೇಳಿಕೆ ನೀಡಿದ್ದ. ಆ ಬಳಿಕ ಎಸ್ಐಟಿಯವರು ಆತನನ್ನು ಬಂಧಿಸಿ ಆ. 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. </p>.ಧರ್ಮಸ್ಥಳ ಪ್ರಕರಣ | ದೂರುದಾರನ ಹೇಳಿಕೆಗಳು ಸುಳ್ಳು: ಹೈಕೋರ್ಟ್ಗೆ ಪ್ರಾಸಿಕ್ಯೂಷನ್.<p>ಸಾಕ್ಷಿ ದೂರುದಾರನನ್ನು ಸೆ.18ರಂದು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ, ಅಂದು ಆತನ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆದಿರಲಿಲ್ಲ.</p> .Video | ಧರ್ಮಸ್ಥಳ: ಎರಡು ದಿನದ ಶೋಧದಲ್ಲಿ 7 ತಲೆಬುರುಡೆ, ನೂರಾರು ಮೂಳೆ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ<strong> </strong>ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿದೂರುದಾರನ್ನು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಂಗಳವಾರ ಪೊಲೀಸರು ಹಾಜರುಪಡಿಸಿದರು.</p>.ಧರ್ಮಸ್ಥಳ ಪ್ರಕರಣ | ಸಿಕ್ಕಿದ್ದು ಪುರುಷರ ಬುರುಡೆ: ಎಸ್ಐಟಿ ಮೂಲಗಳಿಂದ ಮಾಹಿತಿ.<p>ಪ್ರಕರಣದ ಕುರಿತಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 183ರ ಅಡಿ ನ್ಯಾಯಾಲಯದಲ್ಲಿ ಸ್ವಯಂಪ್ರೇರಿತವಾಗಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಆತನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಪ್ರಕರಣ ಸಂಬಂಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಸಾಕ್ಷಿ ದೂರುದಾರ, ‘ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದ ಅವಶೇಷವಿದು’ ಎಂದು ಹೇಳಿ ತಲೆಬುರುಡೆಯನ್ನೂ ಒಪ್ಪಿಸಿದ್ದ. ವಿಶೇಷ ತನಿಖಾ ತಂಡವು (ಎಸ್ಐಟಿ) ಈ ಬಗ್ಗೆ ವಿಚಾರಣೆ ನಡೆಸಿದಾಗ ತಲೆಬುರುಡೆಯನ್ನು ನೆಲದಿಂದ ಹೊರತೆಗೆದ ಜಾಗ ತೋರಿಸಲು ಮೀನಮೇಷ ಎಣಿಸಿದ್ದ. ಬಳಿಕ ಅದನ್ನು ತಾನು ಹೊರತೆಗೆದಿಲ್ಲ ಎಂದು ಹೇಳಿಕೆ ನೀಡಿದ್ದ. ಆ ಬಳಿಕ ಎಸ್ಐಟಿಯವರು ಆತನನ್ನು ಬಂಧಿಸಿ ಆ. 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. </p>.ಧರ್ಮಸ್ಥಳ ಪ್ರಕರಣ | ದೂರುದಾರನ ಹೇಳಿಕೆಗಳು ಸುಳ್ಳು: ಹೈಕೋರ್ಟ್ಗೆ ಪ್ರಾಸಿಕ್ಯೂಷನ್.<p>ಸಾಕ್ಷಿ ದೂರುದಾರನನ್ನು ಸೆ.18ರಂದು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ, ಅಂದು ಆತನ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆದಿರಲಿಲ್ಲ.</p> .Video | ಧರ್ಮಸ್ಥಳ: ಎರಡು ದಿನದ ಶೋಧದಲ್ಲಿ 7 ತಲೆಬುರುಡೆ, ನೂರಾರು ಮೂಳೆ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>