<p><strong>ಮಂಗಳೂರು:</strong> ಧರ್ಮಸ್ಥಳ ಬೆಳವಣಿಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಮುಖ್ಯಸ್ಥ ಪ್ರಣವ್ ಮೊಹಂತಿ ಶುಕ್ರವಾರ ಬೆಳ್ತಂಗಡಿಯ ಕಚೇರಿಗೆ ಭೇಟಿ ನೀಡಿ, ತಂಡದವರ ಜೊತೆ ಚರ್ಚಿಸಿದರು.</p>.<p>ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಜಯಂತ್ ಟಿ. ಹಾಗೂ ಆತನ ಹೇಳಿಕೆಯ ವಿಡಿಯೊ ಚಿತ್ರೀಕರಿಸಿದ್ದ ಯೂಟ್ಯೂಬರ್ ಅಭಿಷೇಕ್ ವಿಚಾರಣೆ ಸತತ ಮೂರನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಗುರುವಾರ ತಡರಾತ್ರಿ 2.30ರವರೆಗೆ ಅಧಿಕಾರಿಗಳು ಜಯಂತ್ಅವರ ವಿಚಾರಣೆ ನಡೆಸಿದ್ದರು. </p>.<p>‘ಸಾಕ್ಷಿ ದೂರುದಾರ ನೀಡಿದ್ದ ಸಂದರ್ಶನ, ಆತನ ಬಂಧನದ ನಂತರ ಕೆಲ ಯೂಟ್ಯೂಬ್ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಆತನ ವಿಡಿಯೊವೊಂದನ್ನು ಅಭಿಷೇಕ್ ಚಿತ್ರೀಕರಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಗಿರೀಶ ಮಟ್ಟೆಣ್ಣವರ ವಿಚಾರಣೆಗೆ ಹಾಜರಾಗಿದ್ದು, ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸತ್ಯಾಸತ್ಯತೆ ಪರಿಶೀಲನೆಗಾಗಿ ಕೂಲಂಕಷ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿವೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ಬಂಧನ ಕುರಿತು ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಬೆಳವಣಿಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಮುಖ್ಯಸ್ಥ ಪ್ರಣವ್ ಮೊಹಂತಿ ಶುಕ್ರವಾರ ಬೆಳ್ತಂಗಡಿಯ ಕಚೇರಿಗೆ ಭೇಟಿ ನೀಡಿ, ತಂಡದವರ ಜೊತೆ ಚರ್ಚಿಸಿದರು.</p>.<p>ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಜಯಂತ್ ಟಿ. ಹಾಗೂ ಆತನ ಹೇಳಿಕೆಯ ವಿಡಿಯೊ ಚಿತ್ರೀಕರಿಸಿದ್ದ ಯೂಟ್ಯೂಬರ್ ಅಭಿಷೇಕ್ ವಿಚಾರಣೆ ಸತತ ಮೂರನೇ ದಿನವಾದ ಶುಕ್ರವಾರವೂ ಮುಂದುವರಿಯಿತು. ಗುರುವಾರ ತಡರಾತ್ರಿ 2.30ರವರೆಗೆ ಅಧಿಕಾರಿಗಳು ಜಯಂತ್ಅವರ ವಿಚಾರಣೆ ನಡೆಸಿದ್ದರು. </p>.<p>‘ಸಾಕ್ಷಿ ದೂರುದಾರ ನೀಡಿದ್ದ ಸಂದರ್ಶನ, ಆತನ ಬಂಧನದ ನಂತರ ಕೆಲ ಯೂಟ್ಯೂಬ್ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಆತನ ವಿಡಿಯೊವೊಂದನ್ನು ಅಭಿಷೇಕ್ ಚಿತ್ರೀಕರಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಗಿರೀಶ ಮಟ್ಟೆಣ್ಣವರ ವಿಚಾರಣೆಗೆ ಹಾಜರಾಗಿದ್ದು, ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸತ್ಯಾಸತ್ಯತೆ ಪರಿಶೀಲನೆಗಾಗಿ ಕೂಲಂಕಷ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿವೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ಬಂಧನ ಕುರಿತು ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>