<p><strong>ಮಂಗಳೂರು</strong>: ಧರ್ಮಸ್ಥಳ ಬೆಳವಣಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಆರೋಪ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ ಅವರ ಪತ್ನಿ ಎಸ್ಐಟಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. </p><p>ಜಯಂತ್ ಅವರ ಪತ್ನಿ ಬೆಂಗಳೂರಿ<br>ನಿಂದ ಬೆಳಿಗ್ಗೆ ಬೆಳ್ತಂಗಡಿಗೆ ಬಂದು ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಅಧಿ<br>ಕಾರಿಗಳ ಬಳಿಗೆ ತೆರಳಿದ್ದರು. ಸಂಜೆ 4.30ರ ವರೆಗೂ ಮಾಹಿತಿ ಪಡೆದು<br>ಕೊಳ್ಳಲಾಯಿತು. </p><p>‘ಪ್ರಜಾವಾಣಿ’ ಜೊತೆ ಮಾತನಾಡಿದ ಜಯಂತ್, ‘ನೋಟಿಸ್ ಬಂದಿತ್ತು. ನಾನು ಕೆಲವು ದಿನಗಳ ಹಿಂದೆ ಹೇಳಿಕೆ ದಾಖಲಿಸಿದ್ದೆ. ಪತ್ನಿಗೆ ಅನಾರೋಗ್ಯ ಇದ್ದ ಕಾರಣ ಸ್ವಲ್ಪ ತಡವಾಯಿತು. ಎಂಜಿನಿಯರಿಂಗ್ ಓದುತ್ತಿರುವ ಮಗನೊಂದಿಗೆ ತೆರಳಿ ಅವರು ಹೇಳಿಕೆ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p><p>‘ಬೇರೆ ಊರಿನಿಂದ ಹೋರಾಟ<br>ಗಾರರು ಯಾರು ಬಂದರೂ ಅವರಿಗೆ ಊಟ, ಆಶ್ರಯ ನೀಡುವ ಸಂಪ್ರ<br>ದಾಯ ಬೆಳೆಸಿಕೊಂಡಿದ್ದೇವೆ. ಸಾಕ್ಷಿ<br>ದೂರುದಾರನಿಗೂ ಹಾಗೇ ಊಟ ಹಾಕಿ<br>ದ್ದೆವು. ಎಸ್ಐಟಿಯವರು ಕರೆದಾಗ ಹೋಗುವುದು ನಮ್ಮ ಕರ್ತವ್ಯ. ಆದ್ದರಿಂದ ಮೂವರೂ ಹೇಳಿಕೆ ಕೊಟ್ಟಿದ್ದೇವೆ’ ಎಂದು ಅವರು ತಿಳಿಸಿದರು. </p><p><strong>ಮಧ್ಯಂತರ ವರದಿ ಇಲ್ಲ: ‘ಹಿರಿಯ ಅಧಿಕಾರಿಗಳಿಂದ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ. ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸುವ ಸಿದ್ಧತೆ ನಡೆದಿದೆ ಎಂಬುದು ವದಂತಿಯಷ್ಟೆ. ಪ್ರಕರಣದ ಎಲ್ಲ ಆಯಾಮಗಳನ್ನೂ ಪರಿಶೀಲಿಸಿ ಸಮರ್ಪಕವಾದ ತನಿಖೆ ನಡೆಸಿದ ನಂತರ ಅಂತಿಮ ವರದಿ ಸಲ್ಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಬೆಳವಣಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಆರೋಪ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ ಅವರ ಪತ್ನಿ ಎಸ್ಐಟಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. </p><p>ಜಯಂತ್ ಅವರ ಪತ್ನಿ ಬೆಂಗಳೂರಿ<br>ನಿಂದ ಬೆಳಿಗ್ಗೆ ಬೆಳ್ತಂಗಡಿಗೆ ಬಂದು ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಅಧಿ<br>ಕಾರಿಗಳ ಬಳಿಗೆ ತೆರಳಿದ್ದರು. ಸಂಜೆ 4.30ರ ವರೆಗೂ ಮಾಹಿತಿ ಪಡೆದು<br>ಕೊಳ್ಳಲಾಯಿತು. </p><p>‘ಪ್ರಜಾವಾಣಿ’ ಜೊತೆ ಮಾತನಾಡಿದ ಜಯಂತ್, ‘ನೋಟಿಸ್ ಬಂದಿತ್ತು. ನಾನು ಕೆಲವು ದಿನಗಳ ಹಿಂದೆ ಹೇಳಿಕೆ ದಾಖಲಿಸಿದ್ದೆ. ಪತ್ನಿಗೆ ಅನಾರೋಗ್ಯ ಇದ್ದ ಕಾರಣ ಸ್ವಲ್ಪ ತಡವಾಯಿತು. ಎಂಜಿನಿಯರಿಂಗ್ ಓದುತ್ತಿರುವ ಮಗನೊಂದಿಗೆ ತೆರಳಿ ಅವರು ಹೇಳಿಕೆ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p><p>‘ಬೇರೆ ಊರಿನಿಂದ ಹೋರಾಟ<br>ಗಾರರು ಯಾರು ಬಂದರೂ ಅವರಿಗೆ ಊಟ, ಆಶ್ರಯ ನೀಡುವ ಸಂಪ್ರ<br>ದಾಯ ಬೆಳೆಸಿಕೊಂಡಿದ್ದೇವೆ. ಸಾಕ್ಷಿ<br>ದೂರುದಾರನಿಗೂ ಹಾಗೇ ಊಟ ಹಾಕಿ<br>ದ್ದೆವು. ಎಸ್ಐಟಿಯವರು ಕರೆದಾಗ ಹೋಗುವುದು ನಮ್ಮ ಕರ್ತವ್ಯ. ಆದ್ದರಿಂದ ಮೂವರೂ ಹೇಳಿಕೆ ಕೊಟ್ಟಿದ್ದೇವೆ’ ಎಂದು ಅವರು ತಿಳಿಸಿದರು. </p><p><strong>ಮಧ್ಯಂತರ ವರದಿ ಇಲ್ಲ: ‘ಹಿರಿಯ ಅಧಿಕಾರಿಗಳಿಂದ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ. ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸುವ ಸಿದ್ಧತೆ ನಡೆದಿದೆ ಎಂಬುದು ವದಂತಿಯಷ್ಟೆ. ಪ್ರಕರಣದ ಎಲ್ಲ ಆಯಾಮಗಳನ್ನೂ ಪರಿಶೀಲಿಸಿ ಸಮರ್ಪಕವಾದ ತನಿಖೆ ನಡೆಸಿದ ನಂತರ ಅಂತಿಮ ವರದಿ ಸಲ್ಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>