<p><strong>ಉಜಿರೆ:</strong> ‘ಪವಿತ್ರ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದ್ದು, ‘ಬುರುಡೆ ಪ್ರಕರಣ’ದಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದರ ಪತ್ತೆಗೆ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.</p>.<p>ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾದ ‘ಧರ್ಮಸ್ಥಳ ಸತ್ಯ ಯಾತ್ರೆ’ ವಾಹನ ರ್ಯಾಲಿ ಬಳಿಕ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ವ್ಯಕ್ತಿಯೊಬ್ಬನ ದೂರು ಆಧರಿಸಿ ಎಸ್ಐಟಿ ರಚಿಸಿದ್ದು ಖಂಡನೀಯ. ಷಡ್ಯಂತ್ರ ನಡೆದಿದೆ ಎಂಬುದನ್ನು ರಾಜ್ಯದ ಉಪಮುಖ್ಯಮಂತ್ರಿಯೇ ಹೇಳಿದ್ದಾರೆ. ಸತ್ಯವನ್ನು ಹೊರಗೆಳೆಯಲು ನಾವು ನೈತಿಕ ಬೆಂಬಲ ನೀಡುತ್ತೇವೆ’ ಎಂದರು.</p>.<p><strong>ಭಕ್ತರೇ ಕ್ಷೇತ್ರದ ಸಂಪತ್ತು:</strong> ‘ದೇಶ– ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರೇ ಕ್ಷೇತ್ರದ ಸಂಪತ್ತು. ಇಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತೆ ವಹಿಸುತ್ತಿದ್ದೇವೆ. ಅಂತಹ ಘಟನೆ ನಡೆದಿಲ್ಲ, ನಡೆಯಲು ಸಾಧ್ಯವೂ ಇಲ್ಲ’ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸ್ಪಷ್ಟಪಡಿಸಿದರು.</p>.<p>ಡಿ. ಸುರೇಂದ್ರ ಕುಮಾರ್, ಶಾಸಕರಾದ ಜಿ.ಡಿ. ಹರೀಶ್ ಗೌಡ ಹುಣಸೂರು, ಎ. ಮಂಜು ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು ಕೋಲಾರ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮುಖಂಡ ಕೆ. ಮಹಾದೇವ ಮೊದಲಾದವರು ಭಾಗವಹಿಸಿದ್ದರು. ಸುಮಾರು 10 ಸಾವಿರ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><blockquote>ಧರ್ಮಸ್ಥಳದ ವಿಷಯ ಹುಡುಗಾಟದ್ದಲ್ಲ. ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸೋಮವಾರ ನಡೆಯಲಿರುವ ಧರ್ಮಸ್ಥಳ ಚಲೊ ಪಕ್ಷಾತೀತವಾದುದು.</blockquote><span class="attribution">–ಬಿ.ವೈ ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<div><blockquote>ದಕ್ಷಿಣ ಕನ್ನಡ, ಕರಾವಳಿಯಲ್ಲಿ ಜನರು ಕಾಂಗ್ರೆಸ್ಗೆ ಮಣೆ ಹಾಕುತ್ತಿಲ್ಲ. ಈ ಭಾಗದ ಜನರ ಒಲವು ಗಳಿಸಲು ರಾಜ್ಯ ಸರ್ಕಾರವೇ ಧರ್ಮಸ್ಥಳ ಪ್ರಕರಣದಲ್ಲಿ ಹುನ್ನಾರ ನಡೆಸಿದೆ. </blockquote><span class="attribution">–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ</span></div>.<div><blockquote>‘ಬಿಜೆಪಿಯವರು ಸಮಾವೇಶ ಮಾಡಲು ಹೊರಟಿರುವುದು ರಾಜಕೀಯ ದುರುದ್ದೇಶವೇ ಹೊರತು ಬೇರೇನೂ ಅಲ್ಲ. ಮಂಜುನಾಥ ಸ್ವಾಮಿಗೆ ಯಾವ ಸಮಾವೇಶದ ಅಗತ್ಯವೂ ಇಲ್ಲ.</blockquote><span class="attribution">–ದಿನೇಶ್ ಗುಂಡೂರಾವ್,ಸಚಿವ</span></div>.<div><blockquote>‘ಧರ್ಮಸ್ಥಳ ಚಲೊ– ಧರ್ಮದೆಡೆಗೆ ನಮ್ಮ ನಡಿಗೆ’ ಧ್ಯೇಯವಾಕ್ಯದೊಂದಿಗೆ ಸೆ. 1ರ ಮಧ್ಯಾಹ್ನ 2 ಗಂಟೆಯಿಂದ ಬಿಜೆಪಿ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಸಮಾವೇಶ ನಡೆಯಲಿದೆ.</blockquote><span class="attribution">–ಕ್ಯಾ.ಬ್ರಿಜೇಶ್ ಚೌಟ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ‘ಪವಿತ್ರ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದ್ದು, ‘ಬುರುಡೆ ಪ್ರಕರಣ’ದಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದರ ಪತ್ತೆಗೆ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.</p>.<p>ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾದ ‘ಧರ್ಮಸ್ಥಳ ಸತ್ಯ ಯಾತ್ರೆ’ ವಾಹನ ರ್ಯಾಲಿ ಬಳಿಕ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ವ್ಯಕ್ತಿಯೊಬ್ಬನ ದೂರು ಆಧರಿಸಿ ಎಸ್ಐಟಿ ರಚಿಸಿದ್ದು ಖಂಡನೀಯ. ಷಡ್ಯಂತ್ರ ನಡೆದಿದೆ ಎಂಬುದನ್ನು ರಾಜ್ಯದ ಉಪಮುಖ್ಯಮಂತ್ರಿಯೇ ಹೇಳಿದ್ದಾರೆ. ಸತ್ಯವನ್ನು ಹೊರಗೆಳೆಯಲು ನಾವು ನೈತಿಕ ಬೆಂಬಲ ನೀಡುತ್ತೇವೆ’ ಎಂದರು.</p>.<p><strong>ಭಕ್ತರೇ ಕ್ಷೇತ್ರದ ಸಂಪತ್ತು:</strong> ‘ದೇಶ– ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರೇ ಕ್ಷೇತ್ರದ ಸಂಪತ್ತು. ಇಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತೆ ವಹಿಸುತ್ತಿದ್ದೇವೆ. ಅಂತಹ ಘಟನೆ ನಡೆದಿಲ್ಲ, ನಡೆಯಲು ಸಾಧ್ಯವೂ ಇಲ್ಲ’ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸ್ಪಷ್ಟಪಡಿಸಿದರು.</p>.<p>ಡಿ. ಸುರೇಂದ್ರ ಕುಮಾರ್, ಶಾಸಕರಾದ ಜಿ.ಡಿ. ಹರೀಶ್ ಗೌಡ ಹುಣಸೂರು, ಎ. ಮಂಜು ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು ಕೋಲಾರ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮುಖಂಡ ಕೆ. ಮಹಾದೇವ ಮೊದಲಾದವರು ಭಾಗವಹಿಸಿದ್ದರು. ಸುಮಾರು 10 ಸಾವಿರ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><blockquote>ಧರ್ಮಸ್ಥಳದ ವಿಷಯ ಹುಡುಗಾಟದ್ದಲ್ಲ. ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸೋಮವಾರ ನಡೆಯಲಿರುವ ಧರ್ಮಸ್ಥಳ ಚಲೊ ಪಕ್ಷಾತೀತವಾದುದು.</blockquote><span class="attribution">–ಬಿ.ವೈ ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<div><blockquote>ದಕ್ಷಿಣ ಕನ್ನಡ, ಕರಾವಳಿಯಲ್ಲಿ ಜನರು ಕಾಂಗ್ರೆಸ್ಗೆ ಮಣೆ ಹಾಕುತ್ತಿಲ್ಲ. ಈ ಭಾಗದ ಜನರ ಒಲವು ಗಳಿಸಲು ರಾಜ್ಯ ಸರ್ಕಾರವೇ ಧರ್ಮಸ್ಥಳ ಪ್ರಕರಣದಲ್ಲಿ ಹುನ್ನಾರ ನಡೆಸಿದೆ. </blockquote><span class="attribution">–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ</span></div>.<div><blockquote>‘ಬಿಜೆಪಿಯವರು ಸಮಾವೇಶ ಮಾಡಲು ಹೊರಟಿರುವುದು ರಾಜಕೀಯ ದುರುದ್ದೇಶವೇ ಹೊರತು ಬೇರೇನೂ ಅಲ್ಲ. ಮಂಜುನಾಥ ಸ್ವಾಮಿಗೆ ಯಾವ ಸಮಾವೇಶದ ಅಗತ್ಯವೂ ಇಲ್ಲ.</blockquote><span class="attribution">–ದಿನೇಶ್ ಗುಂಡೂರಾವ್,ಸಚಿವ</span></div>.<div><blockquote>‘ಧರ್ಮಸ್ಥಳ ಚಲೊ– ಧರ್ಮದೆಡೆಗೆ ನಮ್ಮ ನಡಿಗೆ’ ಧ್ಯೇಯವಾಕ್ಯದೊಂದಿಗೆ ಸೆ. 1ರ ಮಧ್ಯಾಹ್ನ 2 ಗಂಟೆಯಿಂದ ಬಿಜೆಪಿ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಸಮಾವೇಶ ನಡೆಯಲಿದೆ.</blockquote><span class="attribution">–ಕ್ಯಾ.ಬ್ರಿಜೇಶ್ ಚೌಟ, ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>