<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುವ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ವಿಚಾರಣೆಗೆ ಒಳಪಡಿಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅನುಮತಿ ನೀಡಿದೆ.</p><p>ಎರಡು ದಿನ ವಿಚಾರಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಎಸ್ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಶುಕ್ರವಾರ ತಿಳಿಸಿದ್ದು ಅನುಮತಿಗಾಗಿ ಈ ಮೊದಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಪರಿಶೀಲಿಸಿದ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. </p><p>‘ಸಾಕ್ಷಿ ದೂರುದಾನಿಗೆ ನೇರ ಸಂಬಂಧವಿರುವ ಅನೇಕ ವಿಷಯಗಳನ್ನು ಎಸ್ಐಟಿ ಬಯಲು ಮಾಡಿದೆ. ಆತನನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿದರೆ ಮತ್ತಷ್ಟು ವಿಷಯಗಳು ಬಹಿರಂಗಗೊಳ್ಳುವ ಸಾಧ್ಯತೆ ಇದೆ. ನಮಗೆ ಲಿಭಿಸಿದ ಮಾಹಿತಿಗೆ ಇದರಿಂದ ಇನ್ನಷ್ಟು ಪುಷ್ಟಿ ಸಿಗಲಿದೆ’ ಎಂದು ಅಧಿಕಾರಿ ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುವ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ವಿಚಾರಣೆಗೆ ಒಳಪಡಿಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅನುಮತಿ ನೀಡಿದೆ.</p><p>ಎರಡು ದಿನ ವಿಚಾರಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಎಸ್ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಶುಕ್ರವಾರ ತಿಳಿಸಿದ್ದು ಅನುಮತಿಗಾಗಿ ಈ ಮೊದಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಪರಿಶೀಲಿಸಿದ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. </p><p>‘ಸಾಕ್ಷಿ ದೂರುದಾನಿಗೆ ನೇರ ಸಂಬಂಧವಿರುವ ಅನೇಕ ವಿಷಯಗಳನ್ನು ಎಸ್ಐಟಿ ಬಯಲು ಮಾಡಿದೆ. ಆತನನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿದರೆ ಮತ್ತಷ್ಟು ವಿಷಯಗಳು ಬಹಿರಂಗಗೊಳ್ಳುವ ಸಾಧ್ಯತೆ ಇದೆ. ನಮಗೆ ಲಿಭಿಸಿದ ಮಾಹಿತಿಗೆ ಇದರಿಂದ ಇನ್ನಷ್ಟು ಪುಷ್ಟಿ ಸಿಗಲಿದೆ’ ಎಂದು ಅಧಿಕಾರಿ ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>