<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಇದುವರೆಗೆ 30ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಅರ್ಹ ದೂರುಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್ಐಟಿ ಮುಂದಾಗಿದೆ.</p>.<p>ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು ಗ್ರಾಮ ಪಂಚಾಯಿತಿ ಹಾಗೂ ಹಾಗೂ ಪೊಲೀಸರ ಸಹಕಾರದಿಂದ ಅಕ್ರಮವಾಗಿ ವಿಲೇವಾರಿ ಮಾಡಿದ ಆರೋಪಗಳಿಗೆ ಸಂಬಂಧಿಸಿದ ದೂರುಗಳು ಇವುಗಳಲ್ಲಿ ಸೇರಿವೆ.</p>.<p>‘ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಸಂಚು ರೂಪಿಸಲಾಗಿದೆ ಹಾಗೂ ಇದಕ್ಕೆ ವಿದೇಶದಿಂದ ಹಣಕಾಸು ಪೂರೈಕೆ ಆಗಿದೆ’ ಎಂದು ಆರೋಪಿಸಿ ಕೆಲವರು ದೂರು ನೀಡಿದ್ದರು.</p>.<p>ಪ್ರಕರಣದ ತನಿಖೆಯ ಪ್ರಗತಿ ಹಾಗೂ ಸಲ್ಲಿಕೆಯಾಗಿರುವ ದೂರುಗಳ ವಿಲೇವಾರಿ ಕುರಿತು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಬೆಳ್ತಂಗಡಿಯ ಕಚೇರಿಯಲ್ಲಿ ಭಾನುವಾರ ತಂಡದ ಎಸ್ಪಿಗಳಾದ ಜಿತೇಂದ್ರ ಕುಮಾರ್ ದಯಾಮ, ಸಿ.ಎ. ಸೈಮನ್ ಮತ್ತಿತರ ಅಧಿಕಾರಿಗಳ ಜೊತೆ ಸಮಾಲೋಚಿಸಿದರು.</p>.<p>ಕೆಲ ದೂರುಗಳ ಬಗ್ಗೆ ಈಗಾಗಲೇ ತನಿಖಾಧಿಕಾರಿಗಳು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಅವುಗಳಲ್ಲಿ ಯಾವುವು ತನಿಖೆಗೆ ಯೋಗ್ಯವಾಗಿವೆ, ಯಾವ ದೂರುಗಳಿಗೆ ಹಿಂಬರಹ ನೀಡಿ ಮುಕ್ತಾಯಗೊಳಿಸಬಹುದು ಎಂಬ ಬಗ್ಗೆಯೂ ಮೊಹಾಂತಿಯವರು ಅಧಿಕಾರಿಗಳ ಜೊತೆ ಚರ್ಚಿಸಿದರು ಎಂದು ಗೊತ್ತಾಗಿದೆ. </p>.<p>‘ನಮಗೆ 30ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಪರಿಶೀಲಿಸಲಾಗುತ್ತಿದೆ. ತನಿಖೆ ಅಗತ್ಯ ಇಲ್ಲದ ದೂರುಗಳಿದ್ದರೆ, ಹಿಂಬರಹ ನೀಡಿ ಇತ್ಯರ್ಥಪಡಿಸಬೇಕಿದೆ. ಕೆಲ ದೂರುಗಳಲ್ಲಿ ಸಮಗ್ರ ತನಿಖೆಯ ಅಗತ್ಯ ಕಂಡು ಬಂದಿದ್ದು, ಇನ್ನಷ್ಟು ಮಾಹಿತಿ ಕಲೆಹಾಕುವ ಅಗತ್ಯವಿದೆ’ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಇದುವರೆಗೆ 30ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಅರ್ಹ ದೂರುಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್ಐಟಿ ಮುಂದಾಗಿದೆ.</p>.<p>ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು ಗ್ರಾಮ ಪಂಚಾಯಿತಿ ಹಾಗೂ ಹಾಗೂ ಪೊಲೀಸರ ಸಹಕಾರದಿಂದ ಅಕ್ರಮವಾಗಿ ವಿಲೇವಾರಿ ಮಾಡಿದ ಆರೋಪಗಳಿಗೆ ಸಂಬಂಧಿಸಿದ ದೂರುಗಳು ಇವುಗಳಲ್ಲಿ ಸೇರಿವೆ.</p>.<p>‘ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಸಂಚು ರೂಪಿಸಲಾಗಿದೆ ಹಾಗೂ ಇದಕ್ಕೆ ವಿದೇಶದಿಂದ ಹಣಕಾಸು ಪೂರೈಕೆ ಆಗಿದೆ’ ಎಂದು ಆರೋಪಿಸಿ ಕೆಲವರು ದೂರು ನೀಡಿದ್ದರು.</p>.<p>ಪ್ರಕರಣದ ತನಿಖೆಯ ಪ್ರಗತಿ ಹಾಗೂ ಸಲ್ಲಿಕೆಯಾಗಿರುವ ದೂರುಗಳ ವಿಲೇವಾರಿ ಕುರಿತು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಬೆಳ್ತಂಗಡಿಯ ಕಚೇರಿಯಲ್ಲಿ ಭಾನುವಾರ ತಂಡದ ಎಸ್ಪಿಗಳಾದ ಜಿತೇಂದ್ರ ಕುಮಾರ್ ದಯಾಮ, ಸಿ.ಎ. ಸೈಮನ್ ಮತ್ತಿತರ ಅಧಿಕಾರಿಗಳ ಜೊತೆ ಸಮಾಲೋಚಿಸಿದರು.</p>.<p>ಕೆಲ ದೂರುಗಳ ಬಗ್ಗೆ ಈಗಾಗಲೇ ತನಿಖಾಧಿಕಾರಿಗಳು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಅವುಗಳಲ್ಲಿ ಯಾವುವು ತನಿಖೆಗೆ ಯೋಗ್ಯವಾಗಿವೆ, ಯಾವ ದೂರುಗಳಿಗೆ ಹಿಂಬರಹ ನೀಡಿ ಮುಕ್ತಾಯಗೊಳಿಸಬಹುದು ಎಂಬ ಬಗ್ಗೆಯೂ ಮೊಹಾಂತಿಯವರು ಅಧಿಕಾರಿಗಳ ಜೊತೆ ಚರ್ಚಿಸಿದರು ಎಂದು ಗೊತ್ತಾಗಿದೆ. </p>.<p>‘ನಮಗೆ 30ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಪರಿಶೀಲಿಸಲಾಗುತ್ತಿದೆ. ತನಿಖೆ ಅಗತ್ಯ ಇಲ್ಲದ ದೂರುಗಳಿದ್ದರೆ, ಹಿಂಬರಹ ನೀಡಿ ಇತ್ಯರ್ಥಪಡಿಸಬೇಕಿದೆ. ಕೆಲ ದೂರುಗಳಲ್ಲಿ ಸಮಗ್ರ ತನಿಖೆಯ ಅಗತ್ಯ ಕಂಡು ಬಂದಿದ್ದು, ಇನ್ನಷ್ಟು ಮಾಹಿತಿ ಕಲೆಹಾಕುವ ಅಗತ್ಯವಿದೆ’ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>