<p><strong>ಮಂಗಳೂರು</strong>: ‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸದ್ಯ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು’ ಎಂದು ಗೃಹಸಚಿವ ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆದಷ್ಟು ಬೇಗ ಅಂತಿಮ ವರದಿ ಸಲ್ಲಿಸುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ವರದಿ ಸಲ್ಲಿಕೆಯಾದಂತೆ ಸಂಪುಟ ಸಭೆಯಲ್ಲಿ ಮಂಡಿಸಲಿದ್ದೇನೆ’ ಎಂದರು.</p><p>‘ಕೋಮು ಹಿಂಸಾಚಾರದ ಘಟನೆಗಳ ಕಾರಣ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳು ಕರಾವಳಿಯಲ್ಲಿ ಹೂಡಿಕೆಗೆ ಹಿಂದೇಟು ಹಾಕುತ್ತಿವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ತಿಳಿಯದು’ ಎಂದು ಗೃಹ ಸಚಿವರು ಹೇಳಿದರು.</p><p>‘ಈ ಹಿಂದೆ ಕರಾವಳಿಯಲ್ಲಿ ಅಂತಹ ವಾತಾವರಣ ಇದ್ದುದು ಸತ್ಯ. ಈಗ ಬದಲಾಗಿರುವುದು ಸತ್ಯ. ನಾನು ಅಧಿಕೃತ ಅಂಕಿ ಅಂಶಗಳ ಆಧಾರದಲ್ಲಿ ಈ ಮಾತು ಹೇಳುತ್ತೇನೆ. ಕರಾವಳಿಯಲ್ಲಿ ಕೋಮುದ್ವೇಷದ ಕೊಲೆಗಳು, ಡ್ರಗ್ಸ್ ದಂಧೆ ಕಡಿಮೆ ಆಗಿದೆ. ಇಲ್ಲಿ ಶಾಂತಿ ಸ್ಥಾಪನೆ ಆಗು<br>ತ್ತಿರುವುದರ ಸೂಚನೆ ಇದು’ ಎಂದರು.</p><p>‘ಶಾಸಕರ ವಿದೇಶಿ ಪ್ರವಾಸ ಅವರ ವೈಯಕ್ತಿಕ ನಿರ್ಧಾರ. ಅವರ ಹಣದಲ್ಲಿ ಎಲ್ಲಿಗೆ ಬೇಕಾದರೂ ಹೋಗಬಹುದು. ಅದು ಅಧ್ಯಯನ ಪ್ರವಾಸವೂ ಆಗಿರಬಹುದು, ತಪ್ಪು ಎನ್ನಲಾಗದು‘ ಎಂದು<br>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸದ್ಯ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು’ ಎಂದು ಗೃಹಸಚಿವ ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆದಷ್ಟು ಬೇಗ ಅಂತಿಮ ವರದಿ ಸಲ್ಲಿಸುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ವರದಿ ಸಲ್ಲಿಕೆಯಾದಂತೆ ಸಂಪುಟ ಸಭೆಯಲ್ಲಿ ಮಂಡಿಸಲಿದ್ದೇನೆ’ ಎಂದರು.</p><p>‘ಕೋಮು ಹಿಂಸಾಚಾರದ ಘಟನೆಗಳ ಕಾರಣ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳು ಕರಾವಳಿಯಲ್ಲಿ ಹೂಡಿಕೆಗೆ ಹಿಂದೇಟು ಹಾಕುತ್ತಿವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ತಿಳಿಯದು’ ಎಂದು ಗೃಹ ಸಚಿವರು ಹೇಳಿದರು.</p><p>‘ಈ ಹಿಂದೆ ಕರಾವಳಿಯಲ್ಲಿ ಅಂತಹ ವಾತಾವರಣ ಇದ್ದುದು ಸತ್ಯ. ಈಗ ಬದಲಾಗಿರುವುದು ಸತ್ಯ. ನಾನು ಅಧಿಕೃತ ಅಂಕಿ ಅಂಶಗಳ ಆಧಾರದಲ್ಲಿ ಈ ಮಾತು ಹೇಳುತ್ತೇನೆ. ಕರಾವಳಿಯಲ್ಲಿ ಕೋಮುದ್ವೇಷದ ಕೊಲೆಗಳು, ಡ್ರಗ್ಸ್ ದಂಧೆ ಕಡಿಮೆ ಆಗಿದೆ. ಇಲ್ಲಿ ಶಾಂತಿ ಸ್ಥಾಪನೆ ಆಗು<br>ತ್ತಿರುವುದರ ಸೂಚನೆ ಇದು’ ಎಂದರು.</p><p>‘ಶಾಸಕರ ವಿದೇಶಿ ಪ್ರವಾಸ ಅವರ ವೈಯಕ್ತಿಕ ನಿರ್ಧಾರ. ಅವರ ಹಣದಲ್ಲಿ ಎಲ್ಲಿಗೆ ಬೇಕಾದರೂ ಹೋಗಬಹುದು. ಅದು ಅಧ್ಯಯನ ಪ್ರವಾಸವೂ ಆಗಿರಬಹುದು, ತಪ್ಪು ಎನ್ನಲಾಗದು‘ ಎಂದು<br>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>