<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನ ಪತ್ನಿ ಹಾಗೂ ಸಹೋದರಿಯನ್ನು ವಿಶೇಷ ತನಿಖಾ ತಂಡದವರು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ. </p>.<p>‘ಸಾಕ್ಷಿ ದೂರುದಾರನ ಕುಟುಂಬಕ್ಕೆ ಹಣಕಾಸು ವರ್ಗಾವಣೆ ಆಗಿರುವ ಕುರಿತು ಮಾಹಿತಿ ಕಲೆ ಹಾಕಲು ಆತನ ಪತ್ನಿ, ಅಕ್ಕನನ್ನು ಎಸ್ಐಟಿ ಕಚೇರಿಗೆ ಕರೆಸಿ ವಿಚಾರಿಸಲಾಗಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>‘ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಾಗೂ ಧರ್ಮಸ್ಥಳ ಹೊರ ಠಾಣೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಕೆಲ ಪೊಲೀಸ್ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಕೆಲ ಅಸಹಜ ಸಾವುಗಳ ಶವಗಳನ್ನು ವಿಲೇವಾರಿ ಮಾಡಿದಾಗ ಕರ್ತವ್ಯ ನಿರ್ವಹಿಸಿದ್ದವರಿಂದ ಮಾಹಿತಿ ಕಲೆ ಹಾಕಲಾಗಿದೆ’ ಎಂದು ತಿಳಿಸಿವೆ.</p>.ಧರ್ಮಸ್ಥಳ ಪ್ರಕರಣ | ಷಡ್ಯಂತ್ರ ಆರೋಪ: ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.<p>ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್ಐಟಿ ಅಧಿಕಾರಿಗಳು ಸೋಮವಾರ ಭೇಟಿ ನೀಡಿದ್ದರು.</p>.<p>‘ಸಾಕ್ಷಿ ದೂರುದಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿದ್ದಾಗ ಒಂದು ವಿಡಿಯೊ ಚಿತ್ರೀಕರಿಸಲಾಗಿತ್ತು. ಆ ವಿಡಿಯೊ ಚಿತ್ರೀಕರಿಸಿದ್ದು ಮಹೇಶ್ ಶೆಟ್ಟಿ ಅವರ ಮಗಳು. ಹಾಗಾಗಿ ಆಕೆಯ ಹೇಳಿಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದಿದ್ದ ಪದ್ಮಲತಾ, ವೇದವಲ್ಲಿ, ಆನೆ ಮಾವುತ ನಾರಾಯಣ ಮತ್ತು ಆತನ ಸೋದರಿ ಯಮುನಾ ಮತ್ತಿತರ ಕೊಲೆಗಳ ಮರು ತನಿಖೆಗೆ ಒತ್ತಾಯಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಮತ್ತು ಇತರರು ಈಚೆಗೆ ದೂರು ನೀಡಿದ್ದರು.</p>.<p>‘ಆ ದೂರಿನ ತನಿಖೆಯನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಕೈಗೆತ್ತಿಕೊಳ್ಳಲಾಗದು. ಈ ಬಗ್ಗೆ ದೂರುದಾರರಿಗೂ ತಿಳಿಸಿದ್ದೇವೆ’ ಎಂದು ಎಸ್ಐಟಿ ಮೂಲಗಳು ಸ್ಪಷ್ಟಪಡಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನ ಪತ್ನಿ ಹಾಗೂ ಸಹೋದರಿಯನ್ನು ವಿಶೇಷ ತನಿಖಾ ತಂಡದವರು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ. </p>.<p>‘ಸಾಕ್ಷಿ ದೂರುದಾರನ ಕುಟುಂಬಕ್ಕೆ ಹಣಕಾಸು ವರ್ಗಾವಣೆ ಆಗಿರುವ ಕುರಿತು ಮಾಹಿತಿ ಕಲೆ ಹಾಕಲು ಆತನ ಪತ್ನಿ, ಅಕ್ಕನನ್ನು ಎಸ್ಐಟಿ ಕಚೇರಿಗೆ ಕರೆಸಿ ವಿಚಾರಿಸಲಾಗಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>‘ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಾಗೂ ಧರ್ಮಸ್ಥಳ ಹೊರ ಠಾಣೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಕೆಲ ಪೊಲೀಸ್ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಕೆಲ ಅಸಹಜ ಸಾವುಗಳ ಶವಗಳನ್ನು ವಿಲೇವಾರಿ ಮಾಡಿದಾಗ ಕರ್ತವ್ಯ ನಿರ್ವಹಿಸಿದ್ದವರಿಂದ ಮಾಹಿತಿ ಕಲೆ ಹಾಕಲಾಗಿದೆ’ ಎಂದು ತಿಳಿಸಿವೆ.</p>.ಧರ್ಮಸ್ಥಳ ಪ್ರಕರಣ | ಷಡ್ಯಂತ್ರ ಆರೋಪ: ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.<p>ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್ಐಟಿ ಅಧಿಕಾರಿಗಳು ಸೋಮವಾರ ಭೇಟಿ ನೀಡಿದ್ದರು.</p>.<p>‘ಸಾಕ್ಷಿ ದೂರುದಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿದ್ದಾಗ ಒಂದು ವಿಡಿಯೊ ಚಿತ್ರೀಕರಿಸಲಾಗಿತ್ತು. ಆ ವಿಡಿಯೊ ಚಿತ್ರೀಕರಿಸಿದ್ದು ಮಹೇಶ್ ಶೆಟ್ಟಿ ಅವರ ಮಗಳು. ಹಾಗಾಗಿ ಆಕೆಯ ಹೇಳಿಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದಿದ್ದ ಪದ್ಮಲತಾ, ವೇದವಲ್ಲಿ, ಆನೆ ಮಾವುತ ನಾರಾಯಣ ಮತ್ತು ಆತನ ಸೋದರಿ ಯಮುನಾ ಮತ್ತಿತರ ಕೊಲೆಗಳ ಮರು ತನಿಖೆಗೆ ಒತ್ತಾಯಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಮತ್ತು ಇತರರು ಈಚೆಗೆ ದೂರು ನೀಡಿದ್ದರು.</p>.<p>‘ಆ ದೂರಿನ ತನಿಖೆಯನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಕೈಗೆತ್ತಿಕೊಳ್ಳಲಾಗದು. ಈ ಬಗ್ಗೆ ದೂರುದಾರರಿಗೂ ತಿಳಿಸಿದ್ದೇವೆ’ ಎಂದು ಎಸ್ಐಟಿ ಮೂಲಗಳು ಸ್ಪಷ್ಟಪಡಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>