<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದೆ.</p><p>ಈ ಪ್ರಕರಣದ ಸಾಕ್ಷಿ ದೂರುದಾರ ವಿಚಾರಣೆ ವೇಳೆ ನೀಡಿರುವ ಮಾಹಿತಿಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಯಲ್ಲಿ ಮಹಜರು ನಡೆಸಲಿದ್ದಾರೆ ಎಂದು ಗೊತ್ತಾಗಿದೆ.</p><p>ವಿಧಿ ವಿಜ್ಞಾನ ತಜ್ಞರ ತಂಡ ಹಾಗೂ ಸಾಕ್ಷಿದೂರುದಾರ ಕೂಡ ಎಸ್ಐಟಿ ಅಧಿಕಾರಿಗಳ ಜೊತೆಗೆ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಕೊಳ್ಳಲಾಗಿದೆ. ತಿಮರೋಡಿ ಅವರ ಮನೆಗೆ ಮಾಧ್ಯಮದವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಅವರ ಮನೆಯಿಂದ ಸುಮಾರು 1 ಕಿ. ಮೀ.ದೂರದಲ್ಲೇ ಮಾಧ್ಯಮದವರನ್ನು ಪೊಲೀಸರು ತಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದೆ.</p><p>ಈ ಪ್ರಕರಣದ ಸಾಕ್ಷಿ ದೂರುದಾರ ವಿಚಾರಣೆ ವೇಳೆ ನೀಡಿರುವ ಮಾಹಿತಿಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಯಲ್ಲಿ ಮಹಜರು ನಡೆಸಲಿದ್ದಾರೆ ಎಂದು ಗೊತ್ತಾಗಿದೆ.</p><p>ವಿಧಿ ವಿಜ್ಞಾನ ತಜ್ಞರ ತಂಡ ಹಾಗೂ ಸಾಕ್ಷಿದೂರುದಾರ ಕೂಡ ಎಸ್ಐಟಿ ಅಧಿಕಾರಿಗಳ ಜೊತೆಗೆ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಕೊಳ್ಳಲಾಗಿದೆ. ತಿಮರೋಡಿ ಅವರ ಮನೆಗೆ ಮಾಧ್ಯಮದವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಅವರ ಮನೆಯಿಂದ ಸುಮಾರು 1 ಕಿ. ಮೀ.ದೂರದಲ್ಲೇ ಮಾಧ್ಯಮದವರನ್ನು ಪೊಲೀಸರು ತಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>