<p><strong>ಮಂಗಳೂರು</strong>: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯದ ಅನುಮತಿ ಕೋರಿದೆ.</p>.<p>ಹಿಂದೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 183ರ ಅಡಿ ಈ ಹಿಂದೆ ಸಾಕ್ಷಿದೂರುದಾರನ ಹೇಳಿಕೆ ದಾಖಲಿಸಲಾಗಿತ್ತು. ಈ ವೇಳೆ ತಾನು, ಕೊಲೆ ಮತ್ತು ಲೈಂಗಿಕ ದೌರ್ಜನ್ಯ ನಡೆದಿರುವ 10 ಮೃತದೇಹಗಳನ್ನು ಹೂತುಹಾಕಿರುವ ಬಗ್ಗೆ ಸಾಕ್ಷಿದೂರುದಾರ ಹೇಳಿಕೊಂಡಿದ್ದ. </p>.<p>‘ನಂತರದ ದಿನಗಳಲ್ಲಿ ಎಸ್ಐಟಿ ಇನ್ನಿತರ ಸಂಬಂಧಪಟ್ಟ ವ್ಯಕ್ತಿಗಳ ವಿಚಾರಣೆ ನಡೆಸಿದಾಗ, ಶವಗಳನ್ನು ಪೊಲೀಸ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಕಾನೂನುಬದ್ಧವಾಗಿ ಅಂತ್ಯಕ್ರಿಯೆ ಮಾಡಲಾಗಿದೆ ಎಂಬ ಸಂಗತಿ ಬಹಿರಂಗಗೊಂಡಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>‘ಸಾಕ್ಷಿದೂರುದಾರನ ಹೇಳಿಕೆಯಲ್ಲಿ ವ್ಯತಿರಿಕ್ತ ಅಂಶ ಕಂಡಬಂದ ಕಾರಣ, ಅವುಗಳ ಮರುಪರಿಶೀಲನೆಗೆ ಉದ್ದೇಶಿಸಲಾಗಿದೆ. ಸಾಕ್ಷಿದೂರುದಾರನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಿಲ್ಲ. ಬದಲಾಗಿ, ಆತ ಇರುವ ಶಿವಮೊಗ್ಗ ಜೈಲಿಗೆ ಭೇಟಿ ನೀಡಿ ಪ್ರಶ್ನಿಸಲು ಅನುಮತಿ ಕೇಳಲಾಗಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನ ಪತ್ನಿ, ಸೋದರಿ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯದ ಅನುಮತಿ ಕೋರಿದೆ.</p>.<p>ಹಿಂದೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 183ರ ಅಡಿ ಈ ಹಿಂದೆ ಸಾಕ್ಷಿದೂರುದಾರನ ಹೇಳಿಕೆ ದಾಖಲಿಸಲಾಗಿತ್ತು. ಈ ವೇಳೆ ತಾನು, ಕೊಲೆ ಮತ್ತು ಲೈಂಗಿಕ ದೌರ್ಜನ್ಯ ನಡೆದಿರುವ 10 ಮೃತದೇಹಗಳನ್ನು ಹೂತುಹಾಕಿರುವ ಬಗ್ಗೆ ಸಾಕ್ಷಿದೂರುದಾರ ಹೇಳಿಕೊಂಡಿದ್ದ. </p>.<p>‘ನಂತರದ ದಿನಗಳಲ್ಲಿ ಎಸ್ಐಟಿ ಇನ್ನಿತರ ಸಂಬಂಧಪಟ್ಟ ವ್ಯಕ್ತಿಗಳ ವಿಚಾರಣೆ ನಡೆಸಿದಾಗ, ಶವಗಳನ್ನು ಪೊಲೀಸ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಕಾನೂನುಬದ್ಧವಾಗಿ ಅಂತ್ಯಕ್ರಿಯೆ ಮಾಡಲಾಗಿದೆ ಎಂಬ ಸಂಗತಿ ಬಹಿರಂಗಗೊಂಡಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>‘ಸಾಕ್ಷಿದೂರುದಾರನ ಹೇಳಿಕೆಯಲ್ಲಿ ವ್ಯತಿರಿಕ್ತ ಅಂಶ ಕಂಡಬಂದ ಕಾರಣ, ಅವುಗಳ ಮರುಪರಿಶೀಲನೆಗೆ ಉದ್ದೇಶಿಸಲಾಗಿದೆ. ಸಾಕ್ಷಿದೂರುದಾರನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಿಲ್ಲ. ಬದಲಾಗಿ, ಆತ ಇರುವ ಶಿವಮೊಗ್ಗ ಜೈಲಿಗೆ ಭೇಟಿ ನೀಡಿ ಪ್ರಶ್ನಿಸಲು ಅನುಮತಿ ಕೇಳಲಾಗಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನ ಪತ್ನಿ, ಸೋದರಿ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>