<p><strong>ಪುತ್ತೂರು (ದಕ್ಷಿಣ ಕನ್ನಡ): ‘</strong>ಧರ್ಮಸ್ಥಳ ಗ್ರಾಮದ ಬೆಳವಣಿಗೆ ಕುರಿತು ಸಾಕ್ಷಿ ದೂರುದಾರ ಚಿನ್ನಯ್ಯ ಆದಿಚುಂಚನಗಿರಿ ಮಠದ ಸ್ವಾಮೀಜಿ ಅವರಿಗೆ ಬಿಡಿಸಿ ಹೇಳಿದ್ದ’ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ಇಲ್ಲಿ ತಿಳಿಸಿದರು.</p>.<p>ತಮ್ಮ ವಿರುದ್ಧದ ಗಡಿಪಾರು ಆದೇಶ ಕುರಿತ ವಿಚಾರಣೆಗೆ ಇಲ್ಲಿಗೆ ಸೋಮವಾರ ಬಂದಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ‘ಸ್ವಾಮೀಜಿ ಅವರಿಗೆ ವಿವರ ತಿಳಿಸಿದಾಗ ಸಾಕ್ಷಿ ದೂರುದಾರನ ಜೊತೆಗೆ ಸೌಜನ್ಯಾ ಕುಟುಂಬದವರು ಹಾಗೂ ನಾನು ಇದ್ದೆ’ ಎಂದು ತಿಳಿಸಿದರು.</p>.<p>‘ನಾನು ಹೆಣ್ಣುಮಕ್ಕಳ ಪರ ಹೋರಾಟ ಮಾಡುತ್ತಿರುವವ. ನನ್ನ ಮೇಲೆ ಗಡೀಪಾರಿಗೆ ಸಂಬಂಧಿಸಿ ಸುಳ್ಳು ವರದಿ ತಯಾರಿಸಿದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ. ದೇಶದ ಕಾನೂನಿನ ಹೊರತಾಗಿ ಯಾರ ಮೇಲೂ ನಂಬಿಕೆ ಇಲ್ಲ’ ಎಂದು ಹೇಳಿದರು.</p>.<p>ತಿಮರೋಡಿ ಹೇಳಿಕೆ ಕುರಿತು ಪ್ರತಿಕ್ರಿಯೆಗೆ ಸ್ವಾಮೀಜಿ ಅವರನ್ನು ಸಂಪರ್ಕಿಸಲಾಯಿತು. ಆದರೆ, ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು (ದಕ್ಷಿಣ ಕನ್ನಡ): ‘</strong>ಧರ್ಮಸ್ಥಳ ಗ್ರಾಮದ ಬೆಳವಣಿಗೆ ಕುರಿತು ಸಾಕ್ಷಿ ದೂರುದಾರ ಚಿನ್ನಯ್ಯ ಆದಿಚುಂಚನಗಿರಿ ಮಠದ ಸ್ವಾಮೀಜಿ ಅವರಿಗೆ ಬಿಡಿಸಿ ಹೇಳಿದ್ದ’ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ಇಲ್ಲಿ ತಿಳಿಸಿದರು.</p>.<p>ತಮ್ಮ ವಿರುದ್ಧದ ಗಡಿಪಾರು ಆದೇಶ ಕುರಿತ ವಿಚಾರಣೆಗೆ ಇಲ್ಲಿಗೆ ಸೋಮವಾರ ಬಂದಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ‘ಸ್ವಾಮೀಜಿ ಅವರಿಗೆ ವಿವರ ತಿಳಿಸಿದಾಗ ಸಾಕ್ಷಿ ದೂರುದಾರನ ಜೊತೆಗೆ ಸೌಜನ್ಯಾ ಕುಟುಂಬದವರು ಹಾಗೂ ನಾನು ಇದ್ದೆ’ ಎಂದು ತಿಳಿಸಿದರು.</p>.<p>‘ನಾನು ಹೆಣ್ಣುಮಕ್ಕಳ ಪರ ಹೋರಾಟ ಮಾಡುತ್ತಿರುವವ. ನನ್ನ ಮೇಲೆ ಗಡೀಪಾರಿಗೆ ಸಂಬಂಧಿಸಿ ಸುಳ್ಳು ವರದಿ ತಯಾರಿಸಿದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ. ದೇಶದ ಕಾನೂನಿನ ಹೊರತಾಗಿ ಯಾರ ಮೇಲೂ ನಂಬಿಕೆ ಇಲ್ಲ’ ಎಂದು ಹೇಳಿದರು.</p>.<p>ತಿಮರೋಡಿ ಹೇಳಿಕೆ ಕುರಿತು ಪ್ರತಿಕ್ರಿಯೆಗೆ ಸ್ವಾಮೀಜಿ ಅವರನ್ನು ಸಂಪರ್ಕಿಸಲಾಯಿತು. ಆದರೆ, ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>