<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನು ಎಸ್ಐಟಿ ವ್ಯಾಪ್ತಿಗೆ ತಂದು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲು ಡಿ.16ರಂದು ಬೆಳ್ತಂಗಡಿಯಲ್ಲಿ ‘ಮಹಿಳಾ ನ್ಯಾಯ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ‘ಕೊಂದವರು ಯಾರು’ ಅಭಿಯಾನದ ಸದಸ್ಯೆ ಮಲ್ಲಿಗೆ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನವದೆಹಲಿಯಲ್ಲಿ ನಿರ್ಭಯಾ ಪ್ರಕರಣ ನಡೆದ ದಿನವಾದ ಡಿ.16ಅನ್ನು ಮಹಿಳಾ ಸಂಘಟನೆಗಳು ‘ಅತ್ಯಾಚಾರ ವಿರೋಧಿ ದಿನ’ವಾಗಿ ಆಚರಿಸುತ್ತಿವೆ. ಅದೇ ದಿನ ಬೆಳ್ತಂಗಡಿಯಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯೆಯರು ಭಾಗವಹಿಸುವರು’ ಎಂದರು.</p>.<p>ಎಸ್ಐಟಿ ಒತ್ತಡರಹಿತವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಾಕ್ಷಿದಾರರು, ದೂರು ನೀಡಲು ಹೋಗುವವರಿಗೆ ಬೆದರಿಸುವ ಪ್ರಯತ್ನಗಳು ಆಗದಂತೆ ಎಚ್ಚರವಹಿಸಬೇಕು ಎಂದು ಅಭಿಯಾನದ ಸದಸ್ಯೆ ಜ್ಯೋತಿ ಎ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನು ಎಸ್ಐಟಿ ವ್ಯಾಪ್ತಿಗೆ ತಂದು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲು ಡಿ.16ರಂದು ಬೆಳ್ತಂಗಡಿಯಲ್ಲಿ ‘ಮಹಿಳಾ ನ್ಯಾಯ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ‘ಕೊಂದವರು ಯಾರು’ ಅಭಿಯಾನದ ಸದಸ್ಯೆ ಮಲ್ಲಿಗೆ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನವದೆಹಲಿಯಲ್ಲಿ ನಿರ್ಭಯಾ ಪ್ರಕರಣ ನಡೆದ ದಿನವಾದ ಡಿ.16ಅನ್ನು ಮಹಿಳಾ ಸಂಘಟನೆಗಳು ‘ಅತ್ಯಾಚಾರ ವಿರೋಧಿ ದಿನ’ವಾಗಿ ಆಚರಿಸುತ್ತಿವೆ. ಅದೇ ದಿನ ಬೆಳ್ತಂಗಡಿಯಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯೆಯರು ಭಾಗವಹಿಸುವರು’ ಎಂದರು.</p>.<p>ಎಸ್ಐಟಿ ಒತ್ತಡರಹಿತವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಾಕ್ಷಿದಾರರು, ದೂರು ನೀಡಲು ಹೋಗುವವರಿಗೆ ಬೆದರಿಸುವ ಪ್ರಯತ್ನಗಳು ಆಗದಂತೆ ಎಚ್ಚರವಹಿಸಬೇಕು ಎಂದು ಅಭಿಯಾನದ ಸದಸ್ಯೆ ಜ್ಯೋತಿ ಎ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>