<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಪ್ರಕರಣದ ಸಾಕ್ಷಿ ದೂರುದಾರ ಜಾಮೀನು ಕೋರಿ ಕಾನೂನು ಸೇವಾ ಪ್ರಾಧಿಕಾರ ಒದಗಿಸಿದ ವಕೀಲರ ಮೂಲಕ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾನೆ.</p><p>ಈ ಪ್ರಕರಣದ ತನಿಖೆ ನಡೆಸುತ್ತಿರುವವಿಶೇಷ ತನಿಖಾ ತಂಡವು ಸಾಕ್ಷಿದೂರು<br>ದಾರನನ್ನು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಬಂಧಿಸಿತ್ತು. ಆತ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.</p><p><strong>ವಾದ: </strong>ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಯಾವ ರೀತಿ ಕೋರ್ಟ್ ದಾರಿ ತಪ್ಪಿಸಿದ್ದಾರೆ ಎಂಬ ಕುರಿತುಎಸ್ಐಟಿ ಬೆಳ್ತಂಗಡಿಯ ಜೆಎಂಎಫ್ಸಿ ಕೋರ್ಟ್ಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 215 ಅಡಿ ಗುರುವಾರ ವರದಿ ಸಲ್ಲಿಸಿದೆ.</p><p>ಸಾಕ್ಷಿ ದೂರುದಾರ ಹೊರತುಪಡಿಸಿ ಉಳಿದವರುವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಎಸ್ಐಟಿ ಪರ ವಕೀಲರು ವಾದ ಮಂಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಪ್ರಕರಣದ ಸಾಕ್ಷಿ ದೂರುದಾರ ಜಾಮೀನು ಕೋರಿ ಕಾನೂನು ಸೇವಾ ಪ್ರಾಧಿಕಾರ ಒದಗಿಸಿದ ವಕೀಲರ ಮೂಲಕ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾನೆ.</p><p>ಈ ಪ್ರಕರಣದ ತನಿಖೆ ನಡೆಸುತ್ತಿರುವವಿಶೇಷ ತನಿಖಾ ತಂಡವು ಸಾಕ್ಷಿದೂರು<br>ದಾರನನ್ನು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಬಂಧಿಸಿತ್ತು. ಆತ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.</p><p><strong>ವಾದ: </strong>ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಯಾವ ರೀತಿ ಕೋರ್ಟ್ ದಾರಿ ತಪ್ಪಿಸಿದ್ದಾರೆ ಎಂಬ ಕುರಿತುಎಸ್ಐಟಿ ಬೆಳ್ತಂಗಡಿಯ ಜೆಎಂಎಫ್ಸಿ ಕೋರ್ಟ್ಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 215 ಅಡಿ ಗುರುವಾರ ವರದಿ ಸಲ್ಲಿಸಿದೆ.</p><p>ಸಾಕ್ಷಿ ದೂರುದಾರ ಹೊರತುಪಡಿಸಿ ಉಳಿದವರುವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಎಸ್ಐಟಿ ಪರ ವಕೀಲರು ವಾದ ಮಂಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>