1948ರ ನವೆಂಬರ್ 25ರಂದು ಅಂದಿನ ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್, 1968ರ ಅಕ್ಟೋಬರ್ 24 ರಂದು ತಮ್ಮ 21ನೇ ವಯಸ್ಸಿನಲ್ಲಿ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನ ಸಂಪ್ರದಾಯದಂತೆ ಪಟ್ಟಕ್ಕೆ ಏರಿದ್ದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ.