<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದ ಪ್ರಕರಣದ ಸಂಬಂಧ ಎಸ್ಐಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ವಕೀಲ ಮಂಜುನಾಥ್ ಎನ್. ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಧರ್ಮಸ್ಥಳದ ರಘುರಾಮ ಶೆಟ್ಟಿ ದೂರು ನೀಡಿದ್ದು, ಮಂಜುನಾಥ ಎನ್. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಬಿಎನ್ಎಸ್ ಕಲಂ 353(1)(ಬಿ), 353 (2) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಮೃತದೇಹಗಳ ಅವಶೇಷ ಪತ್ತೆಗೆ ಅಗೆಯುವ ಪ್ರಕ್ರಿಯೆ ಕುರಿತು ಜುಲೈ 30 ರಂದು ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವಂತೆ ಅನಧಿಕೃತ ವಿವರಗಳಿದ್ದ ವಿವರಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಮಂಜುನಾಥ ಪ್ರಸಾರ ಮಾಡಿದ್ದಾರೆ. ಆ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p> <p>ಠಾಣೆ ಮುಂದೆ ಹಾಜರಾದ ಗಿರೀಶ</p><p>ಗಿರೀಶ ಮಟ್ಟೆಣ್ಣನವರ ಶನಿವಾರ ಬೆಳ್ತಂಗಡಿ ಠಾಣೆ ಮುಂದೆ ಹಾಜರಾದರು. ಈ ವೇಳೆ ಮಾತನಾಡಿದ ಅವರು ‘ತಿಮರೋಡಿ ಬಂಧಿಸಲು 100ರಷ್ಟು ಪೊಲೀಸರು ಗುರುವಾರ ಬಂದಿದ್ದರು. ಮನೆಯವರು ಆತಂಕಕ್ಕೆ ಒಳಗಾಗಿದ್ದರು. ನಾವೇ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದೆವು. ಈಗ ಎಫ್ಐಆರ್ ದಾಖಲಾಗಿದೆ. ಬಂಧಿಸುವುದಾದರೆ ಬಂಧಿಸಲಿ ಎಂದು ಠಾಣೆಗೆ ಹಾಜರಾಗಿದ್ದೇನೆ’ ಎಂದು ಹೇಳಿದರು.</p><p>ಸ್ನೇಹಮಯಿ ಕೃಷ್ಣ ದೂರು</p><p>ಧರ್ಮಸ್ಥಳದ ಅವಹೇಳನ ಮಾಡುವುದಕ್ಕಾಗಿ ಸುಜಾತಾ ಭಟ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಧರ್ಮಸ್ಥಳ ಠಾಣೆಗೆ ಗುರುವಾರ ದೂರು ಸಲ್ಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಧರ್ಮಸ್ಥಳ ಗ್ರಾಮದ ಪ್ರಕರಣದ ಸಂಬಂಧ ಎಸ್ಐಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ವಕೀಲ ಮಂಜುನಾಥ್ ಎನ್. ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಧರ್ಮಸ್ಥಳದ ರಘುರಾಮ ಶೆಟ್ಟಿ ದೂರು ನೀಡಿದ್ದು, ಮಂಜುನಾಥ ಎನ್. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಬಿಎನ್ಎಸ್ ಕಲಂ 353(1)(ಬಿ), 353 (2) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಮೃತದೇಹಗಳ ಅವಶೇಷ ಪತ್ತೆಗೆ ಅಗೆಯುವ ಪ್ರಕ್ರಿಯೆ ಕುರಿತು ಜುಲೈ 30 ರಂದು ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವಂತೆ ಅನಧಿಕೃತ ವಿವರಗಳಿದ್ದ ವಿವರಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಮಂಜುನಾಥ ಪ್ರಸಾರ ಮಾಡಿದ್ದಾರೆ. ಆ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p> <p>ಠಾಣೆ ಮುಂದೆ ಹಾಜರಾದ ಗಿರೀಶ</p><p>ಗಿರೀಶ ಮಟ್ಟೆಣ್ಣನವರ ಶನಿವಾರ ಬೆಳ್ತಂಗಡಿ ಠಾಣೆ ಮುಂದೆ ಹಾಜರಾದರು. ಈ ವೇಳೆ ಮಾತನಾಡಿದ ಅವರು ‘ತಿಮರೋಡಿ ಬಂಧಿಸಲು 100ರಷ್ಟು ಪೊಲೀಸರು ಗುರುವಾರ ಬಂದಿದ್ದರು. ಮನೆಯವರು ಆತಂಕಕ್ಕೆ ಒಳಗಾಗಿದ್ದರು. ನಾವೇ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದೆವು. ಈಗ ಎಫ್ಐಆರ್ ದಾಖಲಾಗಿದೆ. ಬಂಧಿಸುವುದಾದರೆ ಬಂಧಿಸಲಿ ಎಂದು ಠಾಣೆಗೆ ಹಾಜರಾಗಿದ್ದೇನೆ’ ಎಂದು ಹೇಳಿದರು.</p><p>ಸ್ನೇಹಮಯಿ ಕೃಷ್ಣ ದೂರು</p><p>ಧರ್ಮಸ್ಥಳದ ಅವಹೇಳನ ಮಾಡುವುದಕ್ಕಾಗಿ ಸುಜಾತಾ ಭಟ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಧರ್ಮಸ್ಥಳ ಠಾಣೆಗೆ ಗುರುವಾರ ದೂರು ಸಲ್ಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>