ಮೈಸೂರಿನ ಫೋಕಸ್ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಟಿ. ರಾಮಾನುಜಮ್, ದಿ ಟೈಮ್ಸ್ ಗ್ರೂಪ್ನ ಉಪ ಮಹಾಪ್ರಬಂಧಕ ಕದ್ರಿ ನವನೀತ ಶೆಟ್ಟಿ ಮತ್ತು ಸಾಹಿತಿ ಬೊಳುವಾರು ಮಹ್ಮದ್ ಕುಂಞಿ ಉಪನ್ಯಾಸ ನೀಡುವರು.
ವಿದ್ವಾನ್ ಡಾ. ಕೆ. ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಇದೇ 26 ರಂದು ಸಾಹಿತ್ಯ ಸಮ್ಮೇಳನದ ಅಧಿವೇಶನವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಉದ್ಘಾಟಿಸುವರು. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು.