ವಸ್ತುಪ್ರದರ್ಶನ: ಲಕ್ಷದೀಪೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ವಸ್ತುಪ್ರದರ್ಶನದಲ್ಲಿ ಸಮಾರು 200ಕ್ಕೂ ಹೆಚ್ಚು ಮಳಿಗೆಗಳಿದ್ದು, ಪ್ರಮುಖ ಆಕರ್ಷಣೆಯಾಗಿದೆ. ಜಾನಪದ ಕಲಾವಿದರು (ಕೊಂಬು, ಕಹಳೆ, ಕರಗ, ಕಂಸಾಳೆ) ಇತ್ಯಾದಿ ಕಲಾ ಸೇವೆಯೂ ಅನುರಣಿಸುತ್ತಿವೆ. ಬುಧವಾರ ರಾತ್ರಿ ಸಾಹಿತ್ಯ ಸಮ್ಮೇಳನ ಹಾಗೂ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ. ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನಿರೀಕ್ಷೆ ಇದೆ.
ಕೆರೆಕಟ್ಟೆ ಉತ್ಸವ: ಭಾನುವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು.