<p>ಪ್ರಜಾವಾಣಿ ವಾರ್ತೆ</p>.<p><strong>ಮೂಲ್ಕಿ</strong>: ಡಾ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯಿಂದ ಈ ಸಮಾಜದಲ್ಲಿ ಜನೋಪಯೋಗಿ ಕಾರ್ಯಕ್ರಮಗಳನ್ನು ನಡೆಸುತಿದ್ದು ಸಾಮಾನ್ಯ ಗ್ರಾಮೀಣ ಭಾಗದ ರೈತಾಪಿ ಜನರಿಗೆ ಉತ್ತಮ ಸವಲತ್ತುಗಳು ದೊರೆಯುತ್ತಿದೆ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವ ಮೂಲಕ ಸಮಾಜದಲ್ಲಿ ಸ್ವಂತ ನೆಲೆಯಲ್ಲಿ ನಿಂತಿದ್ದಾರೆ ಎಂದು ಜನಜಾಗೃತಿಯ ಮಾಜಿ ಅಧ್ಯಕ್ಷ ಕೆ. ಭುವನಾಭಿರಾಮ ಉಡುಪ ಹೇಳಿದರು.</p>.<p>ಅವರು ಬಜಪೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಯೋಜನಾಧಿಕಾರಿ ಗಿರೀಶ್ ಕುಮಾರ್ ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದ ಜನರಿಗೆ ಶೈಕ್ಷಣಿಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಯೋಜನೆಯು ಉಪಯೋಗವಾಗುತ್ತಿದ್ದು ಇದರಿಂದ ಮಧ್ಯಮ ವರ್ಗದ ಜನರಿಗೆ ತುಂಬಾ ಸಹಾಯವಾಗಿದೆ. ಜ್ಞಾನವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಲು ಸಹಾಯವಾಗಿದೆ ಎಂದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ, ಧನಂಜಯ ಶೆಟ್ಟಗಾರ್, ಇನ್ನರ್ವೀಲ್ ಅಧ್ಯಕ್ಷೆ ರೇಖಾ ರಘುರಾಮ ಶೆಟ್ಟಿ, ಜ್ಞಾನವಿಕಾಸ ಸಮನ್ವಯಧಿಕಾರಿ ಶೋಭಾ, ಧನಂಜಯ, ಸೇವಾ ಪ್ರತಿನಿಧಿ ಕಮಲ, ವಿಶಾಲಾಕ್ಷಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಮೂಲ್ಕಿ</strong>: ಡಾ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯಿಂದ ಈ ಸಮಾಜದಲ್ಲಿ ಜನೋಪಯೋಗಿ ಕಾರ್ಯಕ್ರಮಗಳನ್ನು ನಡೆಸುತಿದ್ದು ಸಾಮಾನ್ಯ ಗ್ರಾಮೀಣ ಭಾಗದ ರೈತಾಪಿ ಜನರಿಗೆ ಉತ್ತಮ ಸವಲತ್ತುಗಳು ದೊರೆಯುತ್ತಿದೆ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವ ಮೂಲಕ ಸಮಾಜದಲ್ಲಿ ಸ್ವಂತ ನೆಲೆಯಲ್ಲಿ ನಿಂತಿದ್ದಾರೆ ಎಂದು ಜನಜಾಗೃತಿಯ ಮಾಜಿ ಅಧ್ಯಕ್ಷ ಕೆ. ಭುವನಾಭಿರಾಮ ಉಡುಪ ಹೇಳಿದರು.</p>.<p>ಅವರು ಬಜಪೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಯೋಜನಾಧಿಕಾರಿ ಗಿರೀಶ್ ಕುಮಾರ್ ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದ ಜನರಿಗೆ ಶೈಕ್ಷಣಿಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಯೋಜನೆಯು ಉಪಯೋಗವಾಗುತ್ತಿದ್ದು ಇದರಿಂದ ಮಧ್ಯಮ ವರ್ಗದ ಜನರಿಗೆ ತುಂಬಾ ಸಹಾಯವಾಗಿದೆ. ಜ್ಞಾನವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಲು ಸಹಾಯವಾಗಿದೆ ಎಂದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ, ಧನಂಜಯ ಶೆಟ್ಟಗಾರ್, ಇನ್ನರ್ವೀಲ್ ಅಧ್ಯಕ್ಷೆ ರೇಖಾ ರಘುರಾಮ ಶೆಟ್ಟಿ, ಜ್ಞಾನವಿಕಾಸ ಸಮನ್ವಯಧಿಕಾರಿ ಶೋಭಾ, ಧನಂಜಯ, ಸೇವಾ ಪ್ರತಿನಿಧಿ ಕಮಲ, ವಿಶಾಲಾಕ್ಷಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>