<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆ ಕಾಡಿಗೆ ಗುರುವಾರ ತೆರಳಿದ್ದಾರೆ.</p>.ಧರ್ಮಸ್ಥಳ ಪ್ರಕರಣ | ಸಿಕ್ಕಿದ್ದು ಪುರುಷರ ಬುರುಡೆ: ಎಸ್ಐಟಿ ಮೂಲಗಳಿಂದ ಮಾಹಿತಿ.<p>ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನ ಸಿ.ಎನ್ ಅಲಿಯಾಸ್ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನ ಎಸ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ. ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ಐಟಿ ಹಾಗೂ ವಿಧಿವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನೊಳಗೆ ಕರೆದೊಯ್ದಿದ್ದಾರೆ.</p>.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ 7 ತಲೆ ಬುರುಡೆ, ನೂರಾರು ಮೂಳೆಗಳು ಪತ್ತೆ.<p>ತನಿಖೆ ವೇಳೆ ಅನೇಕ ಹೊಸ ವಿಚಾರಗಳು ಪತ್ತೆಯಾಗುತ್ತವೆ. ಅವುಗಳನ್ನು ಮತ್ತೆ ಖಚಿತ ಪಡಿಸಿಕೊಳ್ಳಬೇಕಿರುತ್ತದವೆ. ತಲೆಬುರುಡೆ ಪತ್ತೆಯಾದ ಸ್ಥಳಕ್ಕೆಸಂಬಂಧಿಸಿದ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿವಿಜ್ಞಾನ ತಂಡ ಹಾಗೂ ಎಸ್ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ಎಸ್ಐಟಿ ಅಧಿಕಾರಿಗಳು ಕಾಡಿನೊಳಗೆ ತೆರಳಿದ್ದು, ಸಂಜೆಯಾದರೂ ಹೊರಗೆ ಬಂದಿಲ್ಲ. ಟಾರ್ಚ್ ಮತ್ತಿತರ ಪರಿಕಗಳನ್ನು ಜೊತೆಯಲ್ಲಿ ಒಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.ಬುರುಡೆ ತನಿಖೆ ನಡೆಸಿದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ ಪರಮಾಪ್ತ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆ ಕಾಡಿಗೆ ಗುರುವಾರ ತೆರಳಿದ್ದಾರೆ.</p>.ಧರ್ಮಸ್ಥಳ ಪ್ರಕರಣ | ಸಿಕ್ಕಿದ್ದು ಪುರುಷರ ಬುರುಡೆ: ಎಸ್ಐಟಿ ಮೂಲಗಳಿಂದ ಮಾಹಿತಿ.<p>ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನ ಸಿ.ಎನ್ ಅಲಿಯಾಸ್ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನ ಎಸ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ. ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ಐಟಿ ಹಾಗೂ ವಿಧಿವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನೊಳಗೆ ಕರೆದೊಯ್ದಿದ್ದಾರೆ.</p>.ಧರ್ಮಸ್ಥಳ ಪ್ರಕರಣ: ಕಾಡಿನಲ್ಲಿ 7 ತಲೆ ಬುರುಡೆ, ನೂರಾರು ಮೂಳೆಗಳು ಪತ್ತೆ.<p>ತನಿಖೆ ವೇಳೆ ಅನೇಕ ಹೊಸ ವಿಚಾರಗಳು ಪತ್ತೆಯಾಗುತ್ತವೆ. ಅವುಗಳನ್ನು ಮತ್ತೆ ಖಚಿತ ಪಡಿಸಿಕೊಳ್ಳಬೇಕಿರುತ್ತದವೆ. ತಲೆಬುರುಡೆ ಪತ್ತೆಯಾದ ಸ್ಥಳಕ್ಕೆಸಂಬಂಧಿಸಿದ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿವಿಜ್ಞಾನ ತಂಡ ಹಾಗೂ ಎಸ್ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ಎಸ್ಐಟಿ ಅಧಿಕಾರಿಗಳು ಕಾಡಿನೊಳಗೆ ತೆರಳಿದ್ದು, ಸಂಜೆಯಾದರೂ ಹೊರಗೆ ಬಂದಿಲ್ಲ. ಟಾರ್ಚ್ ಮತ್ತಿತರ ಪರಿಕಗಳನ್ನು ಜೊತೆಯಲ್ಲಿ ಒಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.ಬುರುಡೆ ತನಿಖೆ ನಡೆಸಿದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ ಪರಮಾಪ್ತ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>