<p><strong>ಉಜಿರೆ (ದಕ್ಷಿಣ ಕನ್ನಡ):</strong> ‘ಧರ್ಮಸ್ಥಳ ಕ್ಷೇತ್ರದ ವತಿಯಿಂದ ಸದ್ಯದಲ್ಲೇ ಹಲವು ಸಮಾಜಮುಖಿ ಸೇವಾ ಕಾರ್ಯ ಪ್ರಾರಂಭಿಸಲಾಗುವುದು’ ಎಂದು ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭಾನುವಾರ ಧರ್ಮಸ್ಥಳದಲ್ಲಿ ಪ್ರಕಟಿಸಿದರು.</p>.<p>ಬೆಳ್ತಂಗಡಿ ತಾಲ್ಲೂಕಿನ 81 ಗ್ರಾಮಗಳ ಗ್ರಾಮಸ್ಥರು ಆಯೋಜಿಸಿದ್ದ ‘ಸತ್ಯ ದರ್ಶನ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಕುಟುಂಬದ ಕಾರ್ಯಕ್ರಮ ಎಂಬಂತೆ ಸಂಭ್ರಮದಿಂದ ಭಾಗವಹಿಸಿದ್ದೀರಿ. ಈಗ ನಾವು ನಿರಾಳರಾಗಿದ್ದು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದರು.</p>.<p>‘ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿ ಪಸರಿಸಿದರೂ, ಷಡ್ಯಂತ್ರದ ರಹಸ್ಯ ಬಯಲಾಗಿ ಪವಿತ್ರಕ್ಷೇತ್ರ ಇನ್ನಷ್ಟು ಬೆಳಗುತ್ತಿದೆ. ಭಕ್ತರು, ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈಗ ಸತ್ಯದ ಅನಾವರಣವಾಗಿದ್ದು, ಸರ್ಕಾರ, ಎಸ್ಐಟಿಗೆ ಅಭಿನಂದಿಸುತ್ತೇವೆ’ ಎಂದರು.</p>.<p>ಸಮಾವೇಶಕ್ಕೆ ಪೂರ್ವಭಾವಿಯಾಗಿ ಧರ್ಮಸ್ಥಳದ ಅರ್ಚಕ ರಾಮಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ಚಂಡಿಕಾಹೋಮ ನಡೆಸಲಾಯಿತು.</p>.<p>ಡಾ. ಪ್ರದೀಪ್ ನಾವೂರು, ಸಮಾವೇಶದ ಸಂಚಾಲಕ ಸುಬ್ರಹ್ಮಣ್ಯ ಅಗರ್ತ, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ , ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಇತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ):</strong> ‘ಧರ್ಮಸ್ಥಳ ಕ್ಷೇತ್ರದ ವತಿಯಿಂದ ಸದ್ಯದಲ್ಲೇ ಹಲವು ಸಮಾಜಮುಖಿ ಸೇವಾ ಕಾರ್ಯ ಪ್ರಾರಂಭಿಸಲಾಗುವುದು’ ಎಂದು ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭಾನುವಾರ ಧರ್ಮಸ್ಥಳದಲ್ಲಿ ಪ್ರಕಟಿಸಿದರು.</p>.<p>ಬೆಳ್ತಂಗಡಿ ತಾಲ್ಲೂಕಿನ 81 ಗ್ರಾಮಗಳ ಗ್ರಾಮಸ್ಥರು ಆಯೋಜಿಸಿದ್ದ ‘ಸತ್ಯ ದರ್ಶನ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಕುಟುಂಬದ ಕಾರ್ಯಕ್ರಮ ಎಂಬಂತೆ ಸಂಭ್ರಮದಿಂದ ಭಾಗವಹಿಸಿದ್ದೀರಿ. ಈಗ ನಾವು ನಿರಾಳರಾಗಿದ್ದು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದರು.</p>.<p>‘ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿ ಪಸರಿಸಿದರೂ, ಷಡ್ಯಂತ್ರದ ರಹಸ್ಯ ಬಯಲಾಗಿ ಪವಿತ್ರಕ್ಷೇತ್ರ ಇನ್ನಷ್ಟು ಬೆಳಗುತ್ತಿದೆ. ಭಕ್ತರು, ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈಗ ಸತ್ಯದ ಅನಾವರಣವಾಗಿದ್ದು, ಸರ್ಕಾರ, ಎಸ್ಐಟಿಗೆ ಅಭಿನಂದಿಸುತ್ತೇವೆ’ ಎಂದರು.</p>.<p>ಸಮಾವೇಶಕ್ಕೆ ಪೂರ್ವಭಾವಿಯಾಗಿ ಧರ್ಮಸ್ಥಳದ ಅರ್ಚಕ ರಾಮಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ಚಂಡಿಕಾಹೋಮ ನಡೆಸಲಾಯಿತು.</p>.<p>ಡಾ. ಪ್ರದೀಪ್ ನಾವೂರು, ಸಮಾವೇಶದ ಸಂಚಾಲಕ ಸುಬ್ರಹ್ಮಣ್ಯ ಅಗರ್ತ, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ , ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಇತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>