‘ಗ್ಯಾರಂಟಿ ಯೋಜನೆಗಳ ಹೊರತಾಗಿಯೂ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಯೇ ಇದೆ. ಅತಿ ಹೆಚ್ಚು ಜಿಎಸ್ಟಿ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಕಾಯಕ ಮಾಡುತ್ತಿಲ್ಲ, ದಾಸೋಹ ಮಾಡುತ್ತಿದೆ ಎಂದು ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ದುಡ್ಡು ಸೇರಿದೆ. ಜನ ಕೆಲಸವನ್ನೂ ಮಾಡುತ್ತಿದ್ದಾರೆ. ಖರ್ಚನ್ನೂ ಮಾಡುತ್ತಿದ್ದಾರೆ. ಆ ಹಣವೇ ಮಾರುಕಟ್ಟೆಗೆ ಹರಿದು ಬರುತ್ತಿದೆ. ಹಾಗಾಗಿಯೇ ರಾಜ್ಯದಲ್ಲಿ ಜಿಎಸ್ಟಿ ಸಂಗ್ರಹ ಪ್ರಮಾಣ ಕಳೆದ ಸಾಲಿಗಿಂತ ಶೇ 18ರಷ್ಟು ಹೆಚ್ಚಳವಾಗಿದೆ’ ಎಂದರು.