ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ‘ಕ್ರೀಡೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವಾಗಿ ಸರ್ಕಾರ ಪರಿಗಣಿಸಬೇಕು, ಸಾಧಕ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ, ಉದ್ಯೋಗದಲ್ಲಿ ಮೀಸಲಾತಿ, ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುವ ಕ್ರೀಡಾ ಕೂಟಗಳಿಗೆ ಸರ್ಕಾರದ ಪ್ರೋತ್ಸಾಹ ನೀಡಬೇಕು’ ಎಂಬ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು.