<p><strong>ಉಜಿರೆ</strong>: ಅಂಗವಿಕಲರ ಸೇವೆ ದೇವರ ಸೇವೆಯಷ್ಟೆ ಪವಿತ್ರ ಹಾಗೂ ಪುಣ್ಯದ ಕಾರ್ಯ ಎಂದು ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.</p>.<p>ಉಜಿರೆಯ ‘ಸಾನ್ನಿಧ್ಯ’ ವಿಶೇಷ ಚೇತನ ಮಕ್ಕಳ ಕೌಶಲ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರೀತಿ-ವಿಶ್ವಾಸದಿಂದ ಭಾವನಾತ್ಮಕವಾಗಿ ಸೇವೆ ಮಾಡುವ ಸಂಸ್ಥೆಯ ಶಿಕ್ಷಕರನ್ನು, ಸಿಬ್ಬಂದಿಯನ್ನು ಅವರು ಅಭಿನಂದಿಸಿದರು. ಸಂಸ್ಥೆಗೆ ₹ 1 ಲಕ್ಷ ಮೌಲ್ಯದ ಪರಿಕರಗಳನ್ನು ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಿದರು.</p>.<p>ಎಂಡೋಸಲ್ಫಾನ್ ಸಂತ್ರಸ್ತರ ದಕ್ಷಿಣಕನ್ನಡ ಜಿಲ್ಲಾ ಮಾರ್ಗದರ್ಶಿ ಅಧಿಕಾರಿ ಡಾ.ಜೆಸಿಂತಾ ಡಿಸೋಜ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಶ್ಯಾಮ್ ಪ್ರಕಾಶ್, ರೋಶನ್ ಪ್ರೇಮರಾಜ್ ಸಿಕ್ವೇರಾ, ಪ್ರಮೋದ್ ಆರ್.ನಾಯ್ಕ ಮಾತನಾಡಿದರು.</p>.<p>ಮಹಾಬಲ ಮಾರ್ಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ವಸಂತ್ಕುಮಾರ್ ಶೆಟ್ಟಿ, ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಉದ್ದೇಶವಾಗಿದೆ ಎಂದರು.</p>.<p>ಶಿಕ್ಷಕಿ ಮಲ್ಲಿಕಾ ಸ್ವಾಗತಿಸಿದರು. ಅಕ್ಷತಾ ವಂದಿಸಿದರು. ಅಭಿಲಾಷ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ಕಾರ್ಯಾಗಾರ ನಾಳೆ</p>.<p>ಉಜಿರೆ: ಎಸ್ಡಿಎಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಆಶ್ರಯದಲ್ಲಿ ಸೆ.11ರಿಂದ ಎರಡು ದಿನ ‘ಸಂಶೋಧನೆ: ಬರವಣಿಗೆ ಮತ್ತು ಪ್ರಕಾಶನದ ವಿಧಿ-ವಿಧಾನಗಳು’ ಕುರಿತ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಸೌಮ್ಯ ಬಿ.ಪಿ. ಮತ್ತು ಕಾರ್ಯಾಗಾರದ ಸಂಯೋಜಕರಾದ ದಿವಾಕರ ಕೆ., ಪಿ. ಸುದರ್ಶನ್ ತಿಳಿಸಿದ್ದಾರೆ.</p>.<p>ಸೆ.11ರಂದು ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಹಾವೇರಿ ಜಾನಪದ ವಿ.ವಿ. ನಿವೃತ್ತ ಕುಲಪತಿ ಪ್ರೊ.ಕೆ. ಚಿನ್ನಪ್ಪ ಗೌಡ ಉದ್ಘಾಟಿಸುವರು. ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಅಂಗವಿಕಲರ ಸೇವೆ ದೇವರ ಸೇವೆಯಷ್ಟೆ ಪವಿತ್ರ ಹಾಗೂ ಪುಣ್ಯದ ಕಾರ್ಯ ಎಂದು ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.</p>.<p>ಉಜಿರೆಯ ‘ಸಾನ್ನಿಧ್ಯ’ ವಿಶೇಷ ಚೇತನ ಮಕ್ಕಳ ಕೌಶಲ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರೀತಿ-ವಿಶ್ವಾಸದಿಂದ ಭಾವನಾತ್ಮಕವಾಗಿ ಸೇವೆ ಮಾಡುವ ಸಂಸ್ಥೆಯ ಶಿಕ್ಷಕರನ್ನು, ಸಿಬ್ಬಂದಿಯನ್ನು ಅವರು ಅಭಿನಂದಿಸಿದರು. ಸಂಸ್ಥೆಗೆ ₹ 1 ಲಕ್ಷ ಮೌಲ್ಯದ ಪರಿಕರಗಳನ್ನು ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಿದರು.</p>.<p>ಎಂಡೋಸಲ್ಫಾನ್ ಸಂತ್ರಸ್ತರ ದಕ್ಷಿಣಕನ್ನಡ ಜಿಲ್ಲಾ ಮಾರ್ಗದರ್ಶಿ ಅಧಿಕಾರಿ ಡಾ.ಜೆಸಿಂತಾ ಡಿಸೋಜ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಶ್ಯಾಮ್ ಪ್ರಕಾಶ್, ರೋಶನ್ ಪ್ರೇಮರಾಜ್ ಸಿಕ್ವೇರಾ, ಪ್ರಮೋದ್ ಆರ್.ನಾಯ್ಕ ಮಾತನಾಡಿದರು.</p>.<p>ಮಹಾಬಲ ಮಾರ್ಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ವಸಂತ್ಕುಮಾರ್ ಶೆಟ್ಟಿ, ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಉದ್ದೇಶವಾಗಿದೆ ಎಂದರು.</p>.<p>ಶಿಕ್ಷಕಿ ಮಲ್ಲಿಕಾ ಸ್ವಾಗತಿಸಿದರು. ಅಕ್ಷತಾ ವಂದಿಸಿದರು. ಅಭಿಲಾಷ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ಕಾರ್ಯಾಗಾರ ನಾಳೆ</p>.<p>ಉಜಿರೆ: ಎಸ್ಡಿಎಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಆಶ್ರಯದಲ್ಲಿ ಸೆ.11ರಿಂದ ಎರಡು ದಿನ ‘ಸಂಶೋಧನೆ: ಬರವಣಿಗೆ ಮತ್ತು ಪ್ರಕಾಶನದ ವಿಧಿ-ವಿಧಾನಗಳು’ ಕುರಿತ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಸೌಮ್ಯ ಬಿ.ಪಿ. ಮತ್ತು ಕಾರ್ಯಾಗಾರದ ಸಂಯೋಜಕರಾದ ದಿವಾಕರ ಕೆ., ಪಿ. ಸುದರ್ಶನ್ ತಿಳಿಸಿದ್ದಾರೆ.</p>.<p>ಸೆ.11ರಂದು ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಹಾವೇರಿ ಜಾನಪದ ವಿ.ವಿ. ನಿವೃತ್ತ ಕುಲಪತಿ ಪ್ರೊ.ಕೆ. ಚಿನ್ನಪ್ಪ ಗೌಡ ಉದ್ಘಾಟಿಸುವರು. ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>