<p><strong>ಮಂಗಳೂರು</strong>: ‘ಸರ್ಕಾರಿ ಕಾರ್ಯಕ್ರಮಗಳಿಗೆ ಆ ಕ್ಷೇತ್ರದ ಶಾಸಕರನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿರುವ ಕಂಬಳದ ಸಭೆಗೆ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಆಹ್ವಾನಿಸದೇ, ಅವರಿಗೆ ಅಗೌರವ ತೋರಿಸಲಾಗಿದೆ’ ಎಂದು ಬಿಲ್ಲವ ಸಮುದಾಯದ ಮುಖಂಡರು ಆರೋಪಿಸಿದರು.</p><p>ಇಲ್ಲಿ ಈ ಕುರಿತ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು, ‘ಪಿಲಿಕುಳ ಕಂಬಳದ ಸಭೆಗೆ ಸ್ಥಳೀಯ ಶಾಸಕರನ್ನು ಆಹ್ವಾನಿಸದೇ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕು ಇಲ್ಲದೇ ಜಿಲ್ಲಾಧಿಕಾರಿ ಈ ರೀತಿ ಮಾಡಲಾಗಿದೆ. ಈ ವಿಚಾರವನ್ನು ರಾಜಕೀಯಗೊಳಿಸಿದರೆ ಬಿಲ್ಲವ ಸಮಾಜ ತಕ್ಕ ಉತ್ತರ ನೀಡಲಿದೆ. ಬಿಲ್ಲವ ಸಮುದಾಯಕ್ಕೆ ಸೇರಿರುವ ಶಾಸಕರಿಗೆ ಆಗಿರುವ ಅನ್ಯಾಯವನ್ನು ನಾವು ಪ್ರತಿಭಟಿಸಲಿದ್ದೇವೆ’ ಎಂದರು.</p><p>‘ರಾಜಕೀಯ ಭಿನ್ನಾಭಿಪ್ರಾಯಗಳೇನೇ ಇದ್ದರೂ, ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಗ್ಗಟ್ಟಿನಿಂದ ನಡೆದುಕೊಳ್ಳುವ ಸಂಪ್ರದಾಯ ಜಿಲ್ಲೆಯಲ್ಲಿದೆ. ಪಿಲಿಕುಳ ಕಂಬಳ ವಿಚಾರದಲ್ಲಿ ಆದ ತಪ್ಪನ್ನು ಸರಿಪಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p><p>‘ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಪಿಲಿಕುಳ ಕಂಬಳ ನಡೆದಿಲ್ಲ ನಿಜ. ಆದರೆ ಆ ಕಾರಣಕ್ಕೆ ಶಾಸಕರನ್ನು ಅಗೌರವದಿಂದ ಕಾಣಬೇಕಿಲ್ಲ. ತಮ್ಮ ಕ್ಷೇತ್ರದ ಕಂಬಳದ ಸಭೆಗಳಿಗೆ ಆಹ್ವಾನಿಸದೇ ಅಗೌರವ ತೋರಿಸಿದ್ದನ್ನು ಪ್ರಶ್ನಿಸಿ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸಲು ಉಮಾನಾಥ ಕೋಟ್ಯಾನ್ ಕ್ರಮವಹಿಸಿದ್ದಾರೆ. ಅಲ್ಲಿ ಅವರಿಗೆ ನ್ಯಾಯ ಸಿಗುವ ವಿಶ್ವಾಸವಿದೆ’ ಎಂದರು.</p><p>ಬಿಲ್ಲವ ಸಮುದಾಯದ ಮುಖಂಡ ರಮೇಶ್ ಪೂಜಾರಿ, ‘ಇದು ಕೇವಲ ಬಿಲ್ಲವರಿಗೆ ಮಾತ್ರವಲ್ಲ, ಹಿಂದುಳಿದ ವರ್ಗದ ರಾಜಕಾರಣಿಗೆ ಮಾಡಿದ ಅಪಚಾರ. ಶೋಷಿತ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಇಂತಹ ನಡೆಯನ್ನು ನಿರೀಕ್ಷಿಸಿರಲಿಲ್ಲ. ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸದಿದ್ದರೆ, ನಾವೂ ತಕ್ಕ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು. <br>ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಮಾಜದ ಮುಖಂಡರಾದ ಯಶವಂತ್ ದೇರಾಜೆಗುತ್ತು, ಸತೀಶ್ ಕರ್ಕೇರ, ರಾಮ ಅಮೀನ್ ಪಚ್ಚನಾಡಿ, ವಕೀಲ ಮೋಹನ್ ರಾಜ್ ಕೆ.ಆರ್ ಮತ್ತಿತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಸರ್ಕಾರಿ ಕಾರ್ಯಕ್ರಮಗಳಿಗೆ ಆ ಕ್ಷೇತ್ರದ ಶಾಸಕರನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿರುವ ಕಂಬಳದ ಸಭೆಗೆ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಆಹ್ವಾನಿಸದೇ, ಅವರಿಗೆ ಅಗೌರವ ತೋರಿಸಲಾಗಿದೆ’ ಎಂದು ಬಿಲ್ಲವ ಸಮುದಾಯದ ಮುಖಂಡರು ಆರೋಪಿಸಿದರು.</p><p>ಇಲ್ಲಿ ಈ ಕುರಿತ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು, ‘ಪಿಲಿಕುಳ ಕಂಬಳದ ಸಭೆಗೆ ಸ್ಥಳೀಯ ಶಾಸಕರನ್ನು ಆಹ್ವಾನಿಸದೇ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕು ಇಲ್ಲದೇ ಜಿಲ್ಲಾಧಿಕಾರಿ ಈ ರೀತಿ ಮಾಡಲಾಗಿದೆ. ಈ ವಿಚಾರವನ್ನು ರಾಜಕೀಯಗೊಳಿಸಿದರೆ ಬಿಲ್ಲವ ಸಮಾಜ ತಕ್ಕ ಉತ್ತರ ನೀಡಲಿದೆ. ಬಿಲ್ಲವ ಸಮುದಾಯಕ್ಕೆ ಸೇರಿರುವ ಶಾಸಕರಿಗೆ ಆಗಿರುವ ಅನ್ಯಾಯವನ್ನು ನಾವು ಪ್ರತಿಭಟಿಸಲಿದ್ದೇವೆ’ ಎಂದರು.</p><p>‘ರಾಜಕೀಯ ಭಿನ್ನಾಭಿಪ್ರಾಯಗಳೇನೇ ಇದ್ದರೂ, ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಗ್ಗಟ್ಟಿನಿಂದ ನಡೆದುಕೊಳ್ಳುವ ಸಂಪ್ರದಾಯ ಜಿಲ್ಲೆಯಲ್ಲಿದೆ. ಪಿಲಿಕುಳ ಕಂಬಳ ವಿಚಾರದಲ್ಲಿ ಆದ ತಪ್ಪನ್ನು ಸರಿಪಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p><p>‘ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಪಿಲಿಕುಳ ಕಂಬಳ ನಡೆದಿಲ್ಲ ನಿಜ. ಆದರೆ ಆ ಕಾರಣಕ್ಕೆ ಶಾಸಕರನ್ನು ಅಗೌರವದಿಂದ ಕಾಣಬೇಕಿಲ್ಲ. ತಮ್ಮ ಕ್ಷೇತ್ರದ ಕಂಬಳದ ಸಭೆಗಳಿಗೆ ಆಹ್ವಾನಿಸದೇ ಅಗೌರವ ತೋರಿಸಿದ್ದನ್ನು ಪ್ರಶ್ನಿಸಿ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸಲು ಉಮಾನಾಥ ಕೋಟ್ಯಾನ್ ಕ್ರಮವಹಿಸಿದ್ದಾರೆ. ಅಲ್ಲಿ ಅವರಿಗೆ ನ್ಯಾಯ ಸಿಗುವ ವಿಶ್ವಾಸವಿದೆ’ ಎಂದರು.</p><p>ಬಿಲ್ಲವ ಸಮುದಾಯದ ಮುಖಂಡ ರಮೇಶ್ ಪೂಜಾರಿ, ‘ಇದು ಕೇವಲ ಬಿಲ್ಲವರಿಗೆ ಮಾತ್ರವಲ್ಲ, ಹಿಂದುಳಿದ ವರ್ಗದ ರಾಜಕಾರಣಿಗೆ ಮಾಡಿದ ಅಪಚಾರ. ಶೋಷಿತ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಇಂತಹ ನಡೆಯನ್ನು ನಿರೀಕ್ಷಿಸಿರಲಿಲ್ಲ. ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸದಿದ್ದರೆ, ನಾವೂ ತಕ್ಕ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು. <br>ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಮಾಜದ ಮುಖಂಡರಾದ ಯಶವಂತ್ ದೇರಾಜೆಗುತ್ತು, ಸತೀಶ್ ಕರ್ಕೇರ, ರಾಮ ಅಮೀನ್ ಪಚ್ಚನಾಡಿ, ವಕೀಲ ಮೋಹನ್ ರಾಜ್ ಕೆ.ಆರ್ ಮತ್ತಿತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>