ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ‘ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ₹ 15 ಕೋಟಿ ಅನುದಾನವಿದೆ. ಪ್ರತಿ ತಾಲ್ಲೂಕಿನ ತಹಶೀಲ್ದಾರರ ಖಾತೆಯಲ್ಲಿ ₹ 45 ಲಕ್ಷ ಹಣವಿದ್ದು, ಮಳೆ, ನೆರೆಯಿಂದಾಗಿ ಮನೆ ಹಾನಿಯಾದಲ್ಲಿ ಕೂಡಲೇ ಚೆಕ್ ಮೂಲಕ ಪರಿಹಾರ ನೀಡುವಂತೆ ಸೂಚಿಸಲಾಗಿದೆ’ ಎಂದರು.
ಎಸ್ಡಿಆರ್ಎಫ್ನಲ್ಲಿ 67, ಎನ್ಡಿಆರ್ಎಫ್ನಲ್ಲಿ 20 ಸಿಬ್ಬಂದಿ ಇದ್ದು, ಪ್ರಾಕೃತಿಕ ಅವಘಡಗಳ ಸಂದರ್ಭದಲ್ಲಿ ನೆರವು ನೀಡುತ್ತಿದ್ದಾರೆ. ಜಿಲ್ಲಾಧಿಕಾರಿ, ಲೋಕೋಪಯೋಗಿ, ಸಣ್ಣ ನೀರಾವರಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಅವಲೋಕಿಸುವಂತೆ ತಿಳಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು.