ಈ ರೀತಿ ಹರಕೆ ಸಲ್ಲಿಸುವಾಗ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ. ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ದೇವಳದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೇ, ಪಟಾಕಿ ಮತ್ತು ಸುಡುಮದ್ದುಗಳನ್ನೂ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.