ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಅವರನ್ನು ಸರ್ಕಾರ ಗುಪ್ತ ವಾರ್ತೆ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಿದ್ದು, ತೆರವಾದ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ವಿಕ್ರಂ ಅಮಟೆ ಅವರನ್ನು ನೇಮಿಸಿದೆ.
ಕರ್ನಾಟಕ ರಾಜ್ಯ ಪೊಲೀಸ್ ಸೇವೆಯ (ಕೆಎಸ್ಪಿಎಸ್) ಅಧಿಕಾರಿಯಾಗಿದ್ದ ವಿಕ್ರಂ ಅಮಟೆ ಕಳೆದ ವರ್ಷ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಬಡ್ತಿ ಪಡೆದಿದ್ದರು.
ಗುಪ್ತವಾರ್ತೆ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅವರು ಅದಕ್ಕೂ ಮುನ್ನ ಬೆಳಗಾವಿಯಲ್ಲಿ ಡಿಸಿಪಿಯಾಗಿದ್ದರ