ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಸಾವಿರ ಗಡಿ ದಾಟಿದ ಕೋವಿಡ್‌

258 ಜನರಿಗೆ ಸೋಂಕು: 344 ಮಂದಿ ಗುಣಮುಖ
Last Updated 4 ಅಕ್ಟೋಬರ್ 2020, 3:19 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 258 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 24 ಸಾವಿರದ ಗಡಿ ದಾಟಿದೆ. ಶನಿವಾರ 344 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 17,709 ಮಂದಿ ಗುಣಮುಖರಾಗಿದ್ದು, ಸದ್ಯಕ್ಕೆ 5,744 ಸಕ್ರಿಯ ಪ್ರಕರಣಗಳಿವೆ. ಮೃತಪಟ್ಟಿರುವ 9 ಮಂದಿಗೆ ಕೋವಿಡ್‌–19 ಇರುವುದು ಶನಿವಾರ ದೃಢಪಟ್ಟಿದೆ. ಸಾವಿನ ಸಂಖ್ಯೆ 566ಕ್ಕೆ ಏರಿದೆ.

ಜಿಲ್ಲೆಯಲ್ಲಿ ಇದುವರೆಗೆ 1,68,968 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 1,44,949 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ 257 ಪ್ರಕರಣ

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 257 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಈ ಸೋಂಕಿತರ ಸಂಖ್ಯೆ 11,911ಕ್ಕೆ ಏರಿದೆ.

ಜಿಲ್ಲೆಯಲ್ಲಿ ಶನಿವಾರ 130 ಮಂದಿ ಗುಣಮುಖರಾಗಿದ್ದು, ಒಟ್ಟು 8,545 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಮೃತರ ಸಂಖ್ಯೆ 94 ಕ್ಕೆ ಏರಿದೆ. ಸದ್ಯ 3,352 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT