<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟವು ಸಹಕಾರಿ ಸಂಘಗಳ ಮೂಲಕ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ ₹ 2.05 ಪ್ರೋತ್ಸಾಹ ದರ ನೀಡಲಿದೆ. ಈ ಪ್ರೋತ್ಸಾಹ ದರ ಎರಡರಿಂದ ಮೂರು ತಿಂಗಳ ಕಾಲ ಜಾರಿಯಲ್ಲಿರಲಿದೆ.</p>.<p>‘ಪ್ರೋತ್ಸಾಹ ದರವು ಅ. 11ರಿಂದಲೇ ಅನ್ವಯವಾಗಲಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ದರ ನೀಡಿದರೂ ಅದರ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸುವುದಿಲ್ಲ. ಹಾಲಿನ ಮಾರಾಟ ದರದಲ್ಲಿ ಹೆಚ್ಚಳ ಮಾಡುವುದಿಲ್ಲ’ ಎಂದು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ತಿಳಿಸಿದ್ದಾರೆ.</p>.<p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಹೈನುಗಾರರಿಂದ ಹಾಲು ಖರೀದಿಸುವ ಕನಿಷ್ಠ ದರ ಪ್ರತಿ ಲೀಟರ್ಗೆ ₹ 29.05 ಇದೆ. ಇದಕ್ಕೆ ₹ 2.05 ಸೇರಿಸಿ ₹ 32 ದರ ನೀಡಲಾಗುತ್ತದೆ. ಶೀಘ್ರವೇ ರಾಜ್ಯ ಸರ್ಕಾರದಿಂದ ₹3ರವರೆಗೆ ಪ್ರೋತ್ಸಾಹ ಧನ ಜಾರಿಗೊಂಡರೆ, ಅದು ಕೂಡ ಹೆಚ್ಚುವರಿಯಾಗಿ ಹಾಲು ಉತ್ಪಾದಕರ ಕೈಸೇರಲಿದೆ. ಸಹಕಾರಿ ಸಂಘಕ್ಕೆ ಇನ್ನೂ ಹೆಚ್ಚಿನ ಗುಣಮಟ್ಟದ ಹಾಲು ನೀಡುವುದಕ್ಕೆ ಇದು ಪ್ರೇರಣೆ ಆಗಬೇಕು ಎಂಬ ನಿಟ್ಟಿನಲ್ಲಿ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ’ ಎಂದರು.</p>.<p>‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟದ ಅಧೀನದಲ್ಲಿ ಹಾಲು ಉತ್ಪಾದಕರ 732 ಸಹಕಾರಿ ಸಂಘಗಳಿವೆ. 68 ಸಾವಿರ ಹೈನುಗಾರರು ಹಾಲು ಪೂರೈಸುತ್ತಿದ್ದಾರೆ. ಅವರೆಲ್ಲರಿಗೂ ಇದರಿಂದ ಪ್ರಯೋಜನವಾಗಲಿದೆ’ ಎಂದು ಅವರು ತಿಳಿಸಿದರು.</p>.<p>‘ಎರಡು ತಿಂಗಳಲ್ಲಿ ಗರಿಷ್ಠ 5.65 ಲಕ್ಷ ಲೀಟರ್ವರೆಗೂ ಹಾಲು ಸಂಗ್ರಹವಾಗಿತ್ತು. ಹಾಲಿನಿಂದ ತಯಾರಿಸಿದ 19 ಬಗೆಯ ಉತ್ಪನ್ನಗಳನ್ನು ತಯಾರಿಸಲು ನಿತ್ಯ 5.30 ಲಕ್ಷ ಲೀಟರ್ ಹಾಲು ಬೇಕಾಗುತ್ತದೆ. ಆದರೆ ಸದ್ಯ ಇರುವ ಬೇಡಿಕೆಗೆ ತಕ್ಕಂತೆ ಹಾಲು ಉತ್ಪಾದನೆಯಾಗುತ್ತಿಲ್ಲ. ಈ ಕಾರಣಕ್ಕೆ ಹೈನುಗಾರರಿಗೆ ಉತ್ತೇಜನ ನೀಡಲು ಪ್ರೋತ್ಸಾಹಧನ ನೀಡಲು ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇದೇ 11ರಂದು ಒಕ್ಕೂಟದ ವಿಶೇಷ ಸಭೆಯಲ್ಲಿ ಘೋಷಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಪ್ರೋತ್ಸಾಹಧನ ನೀಡುವ ನಿರ್ಧಾರದಿಂದ ಒಕ್ಕೂಟಕ್ಕೆ ದಿನಕ್ಕೆ ₹ 10 ಲಕ್ಷದಂತೆ ತಿಂಗಳಿಗೆ ₹ 3 ಕೋಟಿಗಳಷ್ಟು ವೆಚ್ಚವಾಗಲಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ನಂದಿನಿ ಐಸ್ಕ್ರೀಂ ಮತ್ತು ಬೆಣ್ಣೆಯನ್ನು ಮಂಗಳೂರು ಹಾಲು ಒಕ್ಕೂಟದಲ್ಲೇ ಉತ್ಪಾದಿಸುವ ಉದ್ದೇಶವಿದೆ. ಈಗ ನಂದಿನಿ ಬೆಣ್ಣೆಯ ಕೊರತೆ ಎದುರಾಗಿದೆ. ಇದು ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಈ ಕೊರತೆ ನೀಗಲಿದೆ’ ಎಂದರು.</p>.<p>ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಮಾರುಕಟ್ಟೆ ವ್ಯವಸ್ಥಾಪಕ ರವಿರಾಜ್ ಉಡುಪ ಇದ್ದರು.</p>.<p>–0–</p>.<p class="Briefhead">ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿನಿಲಯ</p>.<p>ಹೈನುಗಾರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲು ಹಾಲು ಒಕ್ಕೂಟದಿಂದಲೇ ವಿದ್ಯಾರ್ಥಿನಿಲಯವನ್ನು ಕಲ್ಪಿಸಲು ಒಕ್ಕೂಟವು ನಿರ್ಧರಿಸಿದೆ. ಸುಮಾರು 50ರಿಂದ 100 ಹಾಸಿಗೆ ಸೌಲಭ್ಯವಿರುವ ವಿದ್ಯಾರ್ಥಿನಿಲಯವನ್ನುಮಂಗಳೂರಿನಲ್ಲಿ ನಿರ್ಮಿಸುವ ಉದ್ದೇಶವಿದೆ. ಈ ಸೌಲಭ್ಯ ಸಂಪೂರ್ಣ ಉಚಿತ. ಆದರೆ, ಆಹಾರ ವ್ಯವಸ್ಥೆಯನ್ನು ರಿಯಾಯಿತಿ ದರದಲ್ಲಿ ಒದಗಿಸುವ ಚಿಂತನೆ ಇದೆ ಎಂದು ಸುಚರಿತ ಶೆಟ್ಟಿ ತಿಳಿಸಿದರು.</p>.<p>ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲೂ ಹಾಲು ಒಕ್ಕೂಟದ ವಿದ್ಯಾರ್ಥಿನಿಲಯ ಇದ್ದು, ಅಲ್ಲಿ ಸೇರ್ಪಡೆ ಬಯಸುವ ಹಾಲು ಉತ್ಪಾದಕರ ಮಕ್ಕಳು ಈ ಸೌಲಭ್ಯ ಬಳಸಿಕೊಳ್ಳಲು ಒಕ್ಕೂಟದಿಂದ ಶಿಫಾರಸು ಪತ್ರ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟವು ಸಹಕಾರಿ ಸಂಘಗಳ ಮೂಲಕ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ ₹ 2.05 ಪ್ರೋತ್ಸಾಹ ದರ ನೀಡಲಿದೆ. ಈ ಪ್ರೋತ್ಸಾಹ ದರ ಎರಡರಿಂದ ಮೂರು ತಿಂಗಳ ಕಾಲ ಜಾರಿಯಲ್ಲಿರಲಿದೆ.</p>.<p>‘ಪ್ರೋತ್ಸಾಹ ದರವು ಅ. 11ರಿಂದಲೇ ಅನ್ವಯವಾಗಲಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ದರ ನೀಡಿದರೂ ಅದರ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸುವುದಿಲ್ಲ. ಹಾಲಿನ ಮಾರಾಟ ದರದಲ್ಲಿ ಹೆಚ್ಚಳ ಮಾಡುವುದಿಲ್ಲ’ ಎಂದು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ತಿಳಿಸಿದ್ದಾರೆ.</p>.<p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಹೈನುಗಾರರಿಂದ ಹಾಲು ಖರೀದಿಸುವ ಕನಿಷ್ಠ ದರ ಪ್ರತಿ ಲೀಟರ್ಗೆ ₹ 29.05 ಇದೆ. ಇದಕ್ಕೆ ₹ 2.05 ಸೇರಿಸಿ ₹ 32 ದರ ನೀಡಲಾಗುತ್ತದೆ. ಶೀಘ್ರವೇ ರಾಜ್ಯ ಸರ್ಕಾರದಿಂದ ₹3ರವರೆಗೆ ಪ್ರೋತ್ಸಾಹ ಧನ ಜಾರಿಗೊಂಡರೆ, ಅದು ಕೂಡ ಹೆಚ್ಚುವರಿಯಾಗಿ ಹಾಲು ಉತ್ಪಾದಕರ ಕೈಸೇರಲಿದೆ. ಸಹಕಾರಿ ಸಂಘಕ್ಕೆ ಇನ್ನೂ ಹೆಚ್ಚಿನ ಗುಣಮಟ್ಟದ ಹಾಲು ನೀಡುವುದಕ್ಕೆ ಇದು ಪ್ರೇರಣೆ ಆಗಬೇಕು ಎಂಬ ನಿಟ್ಟಿನಲ್ಲಿ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ’ ಎಂದರು.</p>.<p>‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟದ ಅಧೀನದಲ್ಲಿ ಹಾಲು ಉತ್ಪಾದಕರ 732 ಸಹಕಾರಿ ಸಂಘಗಳಿವೆ. 68 ಸಾವಿರ ಹೈನುಗಾರರು ಹಾಲು ಪೂರೈಸುತ್ತಿದ್ದಾರೆ. ಅವರೆಲ್ಲರಿಗೂ ಇದರಿಂದ ಪ್ರಯೋಜನವಾಗಲಿದೆ’ ಎಂದು ಅವರು ತಿಳಿಸಿದರು.</p>.<p>‘ಎರಡು ತಿಂಗಳಲ್ಲಿ ಗರಿಷ್ಠ 5.65 ಲಕ್ಷ ಲೀಟರ್ವರೆಗೂ ಹಾಲು ಸಂಗ್ರಹವಾಗಿತ್ತು. ಹಾಲಿನಿಂದ ತಯಾರಿಸಿದ 19 ಬಗೆಯ ಉತ್ಪನ್ನಗಳನ್ನು ತಯಾರಿಸಲು ನಿತ್ಯ 5.30 ಲಕ್ಷ ಲೀಟರ್ ಹಾಲು ಬೇಕಾಗುತ್ತದೆ. ಆದರೆ ಸದ್ಯ ಇರುವ ಬೇಡಿಕೆಗೆ ತಕ್ಕಂತೆ ಹಾಲು ಉತ್ಪಾದನೆಯಾಗುತ್ತಿಲ್ಲ. ಈ ಕಾರಣಕ್ಕೆ ಹೈನುಗಾರರಿಗೆ ಉತ್ತೇಜನ ನೀಡಲು ಪ್ರೋತ್ಸಾಹಧನ ನೀಡಲು ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇದೇ 11ರಂದು ಒಕ್ಕೂಟದ ವಿಶೇಷ ಸಭೆಯಲ್ಲಿ ಘೋಷಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಪ್ರೋತ್ಸಾಹಧನ ನೀಡುವ ನಿರ್ಧಾರದಿಂದ ಒಕ್ಕೂಟಕ್ಕೆ ದಿನಕ್ಕೆ ₹ 10 ಲಕ್ಷದಂತೆ ತಿಂಗಳಿಗೆ ₹ 3 ಕೋಟಿಗಳಷ್ಟು ವೆಚ್ಚವಾಗಲಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ನಂದಿನಿ ಐಸ್ಕ್ರೀಂ ಮತ್ತು ಬೆಣ್ಣೆಯನ್ನು ಮಂಗಳೂರು ಹಾಲು ಒಕ್ಕೂಟದಲ್ಲೇ ಉತ್ಪಾದಿಸುವ ಉದ್ದೇಶವಿದೆ. ಈಗ ನಂದಿನಿ ಬೆಣ್ಣೆಯ ಕೊರತೆ ಎದುರಾಗಿದೆ. ಇದು ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಈ ಕೊರತೆ ನೀಗಲಿದೆ’ ಎಂದರು.</p>.<p>ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಮಾರುಕಟ್ಟೆ ವ್ಯವಸ್ಥಾಪಕ ರವಿರಾಜ್ ಉಡುಪ ಇದ್ದರು.</p>.<p>–0–</p>.<p class="Briefhead">ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿನಿಲಯ</p>.<p>ಹೈನುಗಾರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲು ಹಾಲು ಒಕ್ಕೂಟದಿಂದಲೇ ವಿದ್ಯಾರ್ಥಿನಿಲಯವನ್ನು ಕಲ್ಪಿಸಲು ಒಕ್ಕೂಟವು ನಿರ್ಧರಿಸಿದೆ. ಸುಮಾರು 50ರಿಂದ 100 ಹಾಸಿಗೆ ಸೌಲಭ್ಯವಿರುವ ವಿದ್ಯಾರ್ಥಿನಿಲಯವನ್ನುಮಂಗಳೂರಿನಲ್ಲಿ ನಿರ್ಮಿಸುವ ಉದ್ದೇಶವಿದೆ. ಈ ಸೌಲಭ್ಯ ಸಂಪೂರ್ಣ ಉಚಿತ. ಆದರೆ, ಆಹಾರ ವ್ಯವಸ್ಥೆಯನ್ನು ರಿಯಾಯಿತಿ ದರದಲ್ಲಿ ಒದಗಿಸುವ ಚಿಂತನೆ ಇದೆ ಎಂದು ಸುಚರಿತ ಶೆಟ್ಟಿ ತಿಳಿಸಿದರು.</p>.<p>ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲೂ ಹಾಲು ಒಕ್ಕೂಟದ ವಿದ್ಯಾರ್ಥಿನಿಲಯ ಇದ್ದು, ಅಲ್ಲಿ ಸೇರ್ಪಡೆ ಬಯಸುವ ಹಾಲು ಉತ್ಪಾದಕರ ಮಕ್ಕಳು ಈ ಸೌಲಭ್ಯ ಬಳಸಿಕೊಳ್ಳಲು ಒಕ್ಕೂಟದಿಂದ ಶಿಫಾರಸು ಪತ್ರ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>