<p><strong>ಪುತ್ತೂರು:</strong> ಚುನಾವಣೆಯ ಸಂದರ್ಭದಲ್ಲಿ ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೇರುವ ಕೆಲವು ರಾಜಕೀಯ ಪಕ್ಷಗಳು ಮತಾಂಧತೆಯನ್ನು ಬೋಧಿಸುತ್ತವೆ. ಅವರಿಗೆ ನಾವು ಅಧಿಕಾರ ಕೊಡಬಾರದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.</p>.<p>ಪುತ್ತೂರು ಶಾಸಕರ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ. ಅವರು ಜನರ ಮನಸ್ಸನ್ನು ಒಡೆಯುವ ಮೂಲಕ ಅಧಿಕಾರಕ್ಕೇರುವ ಪ್ರಯತ್ನವನ್ನು ಮಾಡುತ್ತಾರೆ. ಅದನ್ನು ಕಾಂಗ್ರೆಸ್ನ ಜಾತ್ಯತೀತ ಮನಸ್ಸುಗಳು ತಡೆಯಬೇಕು. ಮುಂದಿನ ಲೋಕಸಭಾ ಚುನಾವಣೆಗೆ ಈಗಲೇ ತಯಾರಿ ಮಾಡಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.</p>.<p>ಶಾಸಕ ಅಶೋಕ್ಕುಮಾರ್ ರೈ ಅವರು ಆರ್.ಬಿ.ತಿಮ್ಮಾಪುರ ಅವರನ್ನು ಗೌರವಿಸಿದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಚುನಾವಣೆಯ ಸಂದರ್ಭದಲ್ಲಿ ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೇರುವ ಕೆಲವು ರಾಜಕೀಯ ಪಕ್ಷಗಳು ಮತಾಂಧತೆಯನ್ನು ಬೋಧಿಸುತ್ತವೆ. ಅವರಿಗೆ ನಾವು ಅಧಿಕಾರ ಕೊಡಬಾರದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.</p>.<p>ಪುತ್ತೂರು ಶಾಸಕರ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ. ಅವರು ಜನರ ಮನಸ್ಸನ್ನು ಒಡೆಯುವ ಮೂಲಕ ಅಧಿಕಾರಕ್ಕೇರುವ ಪ್ರಯತ್ನವನ್ನು ಮಾಡುತ್ತಾರೆ. ಅದನ್ನು ಕಾಂಗ್ರೆಸ್ನ ಜಾತ್ಯತೀತ ಮನಸ್ಸುಗಳು ತಡೆಯಬೇಕು. ಮುಂದಿನ ಲೋಕಸಭಾ ಚುನಾವಣೆಗೆ ಈಗಲೇ ತಯಾರಿ ಮಾಡಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.</p>.<p>ಶಾಸಕ ಅಶೋಕ್ಕುಮಾರ್ ರೈ ಅವರು ಆರ್.ಬಿ.ತಿಮ್ಮಾಪುರ ಅವರನ್ನು ಗೌರವಿಸಿದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>