<p><strong>ಮಂಗಳೂರು</strong>: ವೈದ್ಯಕೀಯ ಸೇವಾ ವೃತ್ತಿಯು ಪ್ರಾಮಾಣಿಕತೆ, ಮಾನವತೆ, ಸೇವಾ ಮನೋಭಾವದ ವೃತ್ತಿಯಾಗಿರಬೇಕು, ಅದು ವ್ಯಾವಹಾರಿಕ ಆಗಿರಬಾರದು ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ ಹೇಳಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವೈದ್ಯರು ರೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಯ ಮಟ್ಟಕ್ಕೆ ಸ್ಪಂದಿಸಬೇಕು ಹಾಗೂ ಅವರ ಆರ್ಥಿಕ ಹಿನ್ನೆಲೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ಶ್ರೇಷ್ಠ ಆಧುನಿಕ ಶೈಲಿಯ ಶಸ್ತ್ರತಜ್ಞ ಜ್ಞಾನವನ್ನು ಬಳಸಿ ಬಡವರಿಗೆ ಸೇವೆ ನೀಡಬೇಕು ಎಂದರು.</p>.<p>ದೇಶದಲ್ಲಿ ಲಕ್ಷಾಂತರ ಜನರು ಪ್ರತಿವರ್ಷ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಅದನ್ನು ತಡೆಗಟ್ಟಲು, ಪ್ರಯಾಣಿಕರ ಸುರಕ್ಷತೆ ಕಾಪಾಡಲು ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು. </p>.<p>ಸಂಸ್ಥೆಯ ಗೃಹ ವಾರ್ತಾಪತ್ರಿಕೆಯಾದ ‘ಮೆಡಿಲೋರ್’ ಅನ್ನು ಬಿಡುಗಡೆಗೊಳಿಸಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಪದಗ್ರಹಣ ನೆರವೇರಿಸಿದರು. ಶಸ್ತ್ರ ಚಿಕಿತ್ಸಾ ತಜ್ಞ ಡಾ. ಭಾಸ್ಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ನೂತನ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಮಾತನಾಡಿ, ‘ಇದೊಂದು ಜವಾಬ್ದಾರಿಯುತ ಮತ್ತು ಸವಾಲುಗಳನ್ನು ಎದುರಿಸುವ ಹುದ್ದೆಯಾಗಿದ್ದು, ಧೈರ್ಯವಾಗಿ ಮತ್ತು ಯಶಸ್ವಿಯಾಗಿ ನಿರ್ವಹಿಸುತ್ತೇನೆ’ ಎಂದರು.</p>.<p>ವೈದ್ಯರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಾದ ಹಲ್ಲೆ, ಬೆದರಿಕೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಸಂಸದರಿಗೆ ನೀಡಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಡಾ. ಮಧುಸೂದನ್, ಡಾ. ಜೂಲಿಯನ್ ಸಲ್ಡಾನ, ಮಹಿಳಾ ವೈದ್ಯ ವಿಭಾಗದ ಅಧ್ಯಕ್ಷೆ ಡಾ. ಪ್ರೇಮಾ ಡಿಕುನ್ಹಾ ಉಪಸ್ಥಿತರಿದ್ದರು.</p>.<p>ನಿರ್ಗಮಿತ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿಸೋಜ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಅರ್ಚನಾ ಭಟ್ ವಾರ್ಷಿಕ ವರದಿ ಮಂಡಿಸಿದರು. ಡಾ.ಸುನಿಲ್ ಜತ್ತನ್ನ ಮತ್ತು ಡಾ. ಮಧುರ ಭಟ್ ನಿರೂಪಿಸಿದರು. ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು.</p>.<p>ರೋಗಿಗಳ ನಿರೀಕ್ಷೆ ಮಟ್ಟಕ್ಕೆ ಸ್ಪಂದಿಸಿ ಅಪಘಾತ ತಡೆಗೆ ಸರ್ಕಾರದಿಂದ ವಿವಿಧ ಕಾರ್ಯಕ್ರಮ ಶಸ್ತ್ರಚಿಕಿತ್ಸಾ ತಜ್ಞ ಡಾ. ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ವೈದ್ಯಕೀಯ ಸೇವಾ ವೃತ್ತಿಯು ಪ್ರಾಮಾಣಿಕತೆ, ಮಾನವತೆ, ಸೇವಾ ಮನೋಭಾವದ ವೃತ್ತಿಯಾಗಿರಬೇಕು, ಅದು ವ್ಯಾವಹಾರಿಕ ಆಗಿರಬಾರದು ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ ಹೇಳಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವೈದ್ಯರು ರೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಯ ಮಟ್ಟಕ್ಕೆ ಸ್ಪಂದಿಸಬೇಕು ಹಾಗೂ ಅವರ ಆರ್ಥಿಕ ಹಿನ್ನೆಲೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ಶ್ರೇಷ್ಠ ಆಧುನಿಕ ಶೈಲಿಯ ಶಸ್ತ್ರತಜ್ಞ ಜ್ಞಾನವನ್ನು ಬಳಸಿ ಬಡವರಿಗೆ ಸೇವೆ ನೀಡಬೇಕು ಎಂದರು.</p>.<p>ದೇಶದಲ್ಲಿ ಲಕ್ಷಾಂತರ ಜನರು ಪ್ರತಿವರ್ಷ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಅದನ್ನು ತಡೆಗಟ್ಟಲು, ಪ್ರಯಾಣಿಕರ ಸುರಕ್ಷತೆ ಕಾಪಾಡಲು ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು. </p>.<p>ಸಂಸ್ಥೆಯ ಗೃಹ ವಾರ್ತಾಪತ್ರಿಕೆಯಾದ ‘ಮೆಡಿಲೋರ್’ ಅನ್ನು ಬಿಡುಗಡೆಗೊಳಿಸಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಪದಗ್ರಹಣ ನೆರವೇರಿಸಿದರು. ಶಸ್ತ್ರ ಚಿಕಿತ್ಸಾ ತಜ್ಞ ಡಾ. ಭಾಸ್ಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ನೂತನ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಮಾತನಾಡಿ, ‘ಇದೊಂದು ಜವಾಬ್ದಾರಿಯುತ ಮತ್ತು ಸವಾಲುಗಳನ್ನು ಎದುರಿಸುವ ಹುದ್ದೆಯಾಗಿದ್ದು, ಧೈರ್ಯವಾಗಿ ಮತ್ತು ಯಶಸ್ವಿಯಾಗಿ ನಿರ್ವಹಿಸುತ್ತೇನೆ’ ಎಂದರು.</p>.<p>ವೈದ್ಯರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಾದ ಹಲ್ಲೆ, ಬೆದರಿಕೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಸಂಸದರಿಗೆ ನೀಡಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಡಾ. ಮಧುಸೂದನ್, ಡಾ. ಜೂಲಿಯನ್ ಸಲ್ಡಾನ, ಮಹಿಳಾ ವೈದ್ಯ ವಿಭಾಗದ ಅಧ್ಯಕ್ಷೆ ಡಾ. ಪ್ರೇಮಾ ಡಿಕುನ್ಹಾ ಉಪಸ್ಥಿತರಿದ್ದರು.</p>.<p>ನಿರ್ಗಮಿತ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿಸೋಜ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಅರ್ಚನಾ ಭಟ್ ವಾರ್ಷಿಕ ವರದಿ ಮಂಡಿಸಿದರು. ಡಾ.ಸುನಿಲ್ ಜತ್ತನ್ನ ಮತ್ತು ಡಾ. ಮಧುರ ಭಟ್ ನಿರೂಪಿಸಿದರು. ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು.</p>.<p>ರೋಗಿಗಳ ನಿರೀಕ್ಷೆ ಮಟ್ಟಕ್ಕೆ ಸ್ಪಂದಿಸಿ ಅಪಘಾತ ತಡೆಗೆ ಸರ್ಕಾರದಿಂದ ವಿವಿಧ ಕಾರ್ಯಕ್ರಮ ಶಸ್ತ್ರಚಿಕಿತ್ಸಾ ತಜ್ಞ ಡಾ. ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>