<p><strong>ಮಂಗಳೂರು</strong>: ವೆನ್ಲಾಕ್, ಲೇಡಿಗೋಶನ್ ಹಾಗೂ ಕೆಎಂಸಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವೆನ್ಲಾಕ್– ಲೇಡಿಗೋಶನ್ ಆಸ್ಪತ್ರೆಗಳ 175ನೇ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ 43 ಹಿರಿಯ ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ಈ ಮೂರು ಸಂಸ್ಥೆಗಳಲ್ಲಿ 25–30 ವರ್ಷ ಕಾರ್ಯ ನಿರ್ವಹಿಸಿದ ವೈದ್ಯರು, ಶಿಕ್ಷಕರು, ಡೀನ್, ಜಿಲ್ಲಾ ಸರ್ಜನ್ಗಳನ್ನು ಹಿರಿತನದ ಆಧಾರದಲ್ಲಿ ಗುರುತಿಸಿ ಗೌರವಿಸಲಾಯಿತು.</p>.<p>ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಇನ್ನಷ್ಟು ವೈದ್ಯರು, ನರ್ಸಿಂಗ್ ಅಧಿಕಾರಿಗಳು, ಸಹಾಯ ಸಿಬ್ಬಂದಿ, ಗ್ರೂಪ್ ಡಿ ನೌಕರರನ್ನು ಗುರುತಿಸಿ ಗೌರವಿಸುವ ಯೋಜನೆ ಇದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ.ಎಸ್ ಹೇಳಿದರು.</p>.<p>ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶಾಂತಾರಾಮ ಶೆಟ್ಟಿ ಮಾತನಾಡಿ, ವೆನ್ಲಾಕ್, ಲೇಡಿಗೋಶನ್ ಹಾಗೂ ಕೆಎಂಸಿ ಸಂಸ್ಥೆಗಳು ಆರೋಗ್ಯ ಸೇವೆ ನೀಡುವಲ್ಲಿ ಹಾಲು–ಜೇನು– ಸಕ್ಕರೆಯ ಹಾಗೆ ಬೇರ್ಪಡಿಸಲು ಆಗದಷ್ಟು ಸೇವಾ ಬಾಂಧವ್ಯ, ಬದ್ಧತೆ ಹೊಂದಿವೆ ಎಂದರು.</p>.<p>ಕೆಎಂಸಿ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಸುರೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಡಾ. ಅಣ್ಣಯ್ಯ ಕುಲಾಲ್ ಉಪಸ್ಥಿತರಿದ್ದರು.</p>.<p>ಸನ್ಮಾನಿತರ ಪರವಾಗಿ ಡಾ. ಎಂ.ವಿ.ಪ್ರಭು, ಡಾ.ಆರ್.ಎಂ.ಶೆಣೈ, ಡಾ. ಜೋ ವರ್ಗೀಸ್, ಡಾ.ಸದಾಶಿವ ಶಾನುಭೋಗ, ಡಾ.ವತ್ಸಲಾ ಮಲ್ಯ ಮಾತನಾಡಿದರು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್ ವಂದಿಸಿದರು. ಡಾ. ಸೀತಾರಾಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ವೆನ್ಲಾಕ್, ಲೇಡಿಗೋಶನ್ ಹಾಗೂ ಕೆಎಂಸಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವೆನ್ಲಾಕ್– ಲೇಡಿಗೋಶನ್ ಆಸ್ಪತ್ರೆಗಳ 175ನೇ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ 43 ಹಿರಿಯ ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ಈ ಮೂರು ಸಂಸ್ಥೆಗಳಲ್ಲಿ 25–30 ವರ್ಷ ಕಾರ್ಯ ನಿರ್ವಹಿಸಿದ ವೈದ್ಯರು, ಶಿಕ್ಷಕರು, ಡೀನ್, ಜಿಲ್ಲಾ ಸರ್ಜನ್ಗಳನ್ನು ಹಿರಿತನದ ಆಧಾರದಲ್ಲಿ ಗುರುತಿಸಿ ಗೌರವಿಸಲಾಯಿತು.</p>.<p>ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಇನ್ನಷ್ಟು ವೈದ್ಯರು, ನರ್ಸಿಂಗ್ ಅಧಿಕಾರಿಗಳು, ಸಹಾಯ ಸಿಬ್ಬಂದಿ, ಗ್ರೂಪ್ ಡಿ ನೌಕರರನ್ನು ಗುರುತಿಸಿ ಗೌರವಿಸುವ ಯೋಜನೆ ಇದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ.ಎಸ್ ಹೇಳಿದರು.</p>.<p>ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶಾಂತಾರಾಮ ಶೆಟ್ಟಿ ಮಾತನಾಡಿ, ವೆನ್ಲಾಕ್, ಲೇಡಿಗೋಶನ್ ಹಾಗೂ ಕೆಎಂಸಿ ಸಂಸ್ಥೆಗಳು ಆರೋಗ್ಯ ಸೇವೆ ನೀಡುವಲ್ಲಿ ಹಾಲು–ಜೇನು– ಸಕ್ಕರೆಯ ಹಾಗೆ ಬೇರ್ಪಡಿಸಲು ಆಗದಷ್ಟು ಸೇವಾ ಬಾಂಧವ್ಯ, ಬದ್ಧತೆ ಹೊಂದಿವೆ ಎಂದರು.</p>.<p>ಕೆಎಂಸಿ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಸುರೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಡಾ. ಅಣ್ಣಯ್ಯ ಕುಲಾಲ್ ಉಪಸ್ಥಿತರಿದ್ದರು.</p>.<p>ಸನ್ಮಾನಿತರ ಪರವಾಗಿ ಡಾ. ಎಂ.ವಿ.ಪ್ರಭು, ಡಾ.ಆರ್.ಎಂ.ಶೆಣೈ, ಡಾ. ಜೋ ವರ್ಗೀಸ್, ಡಾ.ಸದಾಶಿವ ಶಾನುಭೋಗ, ಡಾ.ವತ್ಸಲಾ ಮಲ್ಯ ಮಾತನಾಡಿದರು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್ ವಂದಿಸಿದರು. ಡಾ. ಸೀತಾರಾಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>