<p>ಮಂಗಳೂರು: ನಗರದ ಕದ್ರಿ ಶಿವಬಾಗ್ನಲ್ಲಿ ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಆರೋಪಿ ನೀಡುವ ಕಾರಣ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜುಲೈ1ರ ಸಂಜೆ 5 ಗಂಟೆಗೆ ಕದ್ರಿ ಶಿವಭಾಗ್ನ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿತ್ತು. ನಾಯಿಯ ಮೇಲೆ ರಕ್ತ ಇರುವ ಬಗ್ಗೆ ಎನಿಮಲ್ ಕೇರ್ ಟ್ರಸ್ಟ್ನವರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಅದರಂತೆ ಟ್ರಸ್ಟ್ನ ಸುಮಾ ಆರ್. ನಾಯಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ನಾಯಿಯ ಮರಣೋತ್ತರ ಪರೀಕ್ಷೆ ನಡೆಸಿದಾಗ ದೇಹದಲ್ಲಿ ಗುಂಡಿನಂತಹ ವಸ್ತು ಪತ್ತೆಯಾಗಿದ್ದು, ಏರ್ಗನ್ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿತ್ತು. ದೂರುದಾರರು ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ ಮೇಲೆ ಸಂಶಯ ವ್ಯಕ್ತಪಡಿಸಿ, ದೂರಿನಲ್ಲಿ ದಾಖಲಿಸಿದ್ದನ್ನು ಆಧರಿಸಿ, ಪೊಲೀಸರು ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ನಗರದ ಕದ್ರಿ ಶಿವಬಾಗ್ನಲ್ಲಿ ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಆರೋಪಿ ನೀಡುವ ಕಾರಣ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜುಲೈ1ರ ಸಂಜೆ 5 ಗಂಟೆಗೆ ಕದ್ರಿ ಶಿವಭಾಗ್ನ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿತ್ತು. ನಾಯಿಯ ಮೇಲೆ ರಕ್ತ ಇರುವ ಬಗ್ಗೆ ಎನಿಮಲ್ ಕೇರ್ ಟ್ರಸ್ಟ್ನವರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಅದರಂತೆ ಟ್ರಸ್ಟ್ನ ಸುಮಾ ಆರ್. ನಾಯಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ನಾಯಿಯ ಮರಣೋತ್ತರ ಪರೀಕ್ಷೆ ನಡೆಸಿದಾಗ ದೇಹದಲ್ಲಿ ಗುಂಡಿನಂತಹ ವಸ್ತು ಪತ್ತೆಯಾಗಿದ್ದು, ಏರ್ಗನ್ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿತ್ತು. ದೂರುದಾರರು ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ ಮೇಲೆ ಸಂಶಯ ವ್ಯಕ್ತಪಡಿಸಿ, ದೂರಿನಲ್ಲಿ ದಾಖಲಿಸಿದ್ದನ್ನು ಆಧರಿಸಿ, ಪೊಲೀಸರು ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>