ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ: ಸುಬ್ರಹ್ಮಣ್ಯ ಬಳಿ ಮೊಸಳೆ ಅಟ್ಟಿಸಿಕೊಂಡು ಹೋದ ನಾಯಿಗಳು

Last Updated 2 ಆಗಸ್ಟ್ 2022, 13:41 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಯೇನೆಕಲ್ಲು ಗ್ರಾಮದ ಬಚ್ಚನಾಯಕನ ದೈವಸ್ಥಾನದ ಬಳಿ ಮೊಸಳೆಯೊಂದು ಮಂಗಳವಾರ ಕಾಣಿಸಿಕೊಂಡಿದೆ.

ಇಲ್ಲಿನ ಕಲ್ಲಾಜೆ ಹೊಳೆಯ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ಬಳಿಕ ಮತ್ತೆ ಹೊಳೆಯತ್ತ ಮರಳಿದೆ. ಈ ವೇಳೆ ಕೆಲ ಬೀದಿನಾಯಿಗಳು ಆ ಮೊಸಳೆಯನ್ನು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಈ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ಹೊಳೆ ತುಂಬಿ ಹರಿದಿತ್ತು. ಹೊಳೆಯಲ್ಲಿ ತೇಲಿಬಂದ‌ ಮೊಸಳೆ ದಡಕ್ಕೆ ಬಂದಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೊಸಳೆ ಕಾಣಿಸಿಕೊಂಡ ವಿಡಿಯೊವನ್ನು ಸ್ಥಳೀಯರೊಬ್ಬರು ಚಿತ್ರೀಕರಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT