ಗುರುಪುರ ವಜ್ರದೇಹಿ ಸಂಸ್ಥಾನದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಎಂಬ ಶಬ್ದ ಪ್ರಾಚೀನವಾದುದು. ಬುದ್ದಿಜೀವಿಗಳು ಇದರ ಬಗ್ಗೆ ಅಪಾರ್ಥ ಬರುವಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.
ಶಕ್ತಿ ಎಜುಕೇಶನ್ ಟ್ರಸ್ಟ್ ಆಡಳಿತಾಧಿಕಾರಿ ಕೆ.ಸಿ. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ ಎಜುಕೇಶನ್ ಟ್ರಸ್ಟ್ ಮುಖ್ಯ ಸಲಹೆಗಾರ ರಮೇಶ್ ಕೆ. ಮಾತನಾಡಿ, ಸರಣಿ ಕಾರ್ಯಕ್ರಮದಡಿ ತಿಂಗಳಲ್ಲಿ ಎರಡು ಶನಿವಾರ ಉಪನ್ಯಾಸ ನಡೆಯಲಿದ್ದು, ರಾಮಾಯಣ, ಮಹಾಭಾರತ, ಪುರಾಣ, ವೇದ, ಶೌರ್ಯ, ಪರಂಪರೆ ಸಹಿತ 25 ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.