ಪುತ್ತೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಸಿರಿ ಯೋಜನೆ ಅನುಷ್ಠಾನದ ಆರಂಭದಲ್ಲಿ ಯೋಜನೆಯಡಿ 24X7 ಕುಡಿಯುವ ನೀರು ಪೂರೈಸುವ ಆಶ್ವಾಸನೆ ನೀಡಲಾಗಿತ್ತು. ಇದೀಗ ವಾರಕ್ಕೆ ಮೂರು ದಿನ ಕೇವಲ 2 ಗಂಟೆ ಮಾತ್ರ ನೀರು ಒದಗಿಸಲಾಗುತ್ತಿದೆ. ಉಪ್ಪಿನಂಗಡಿ ಅಣೆಕಟ್ಟೆಯಲ್ಲಿ ಬೇಕಾದಷ್ಟು ನೀರು ಇದ್ದರೂ ಪೂರೈಕೆ ಮಾಡದೆ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಜಲರಿಸಿ ಯೋಜನೆ ನಗರದ ಜನರಿಗೆ ನೀರು ಒದಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.