ಎರಡು ದಿನಗಳಿಂದ ವಿಪರೀತ ಮಳೆ ಸುರಿಯುವ ಕಾರಣ ಪಯಸ್ವಿನಿ ನದಿಯಲ್ಲಿ ಕೆಸರು ಮಿಶ್ರಿತ ನೀರು ಬರುತ್ತಿದೆ. ಇದರಿಂದ ಸಮಸ್ಯೆ ಆಗಿದೆ ಎಂದು ಪಂಚಾಯತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಬೇಡಿಕೆಗೆ ತಕ್ಕಂತೆ ನೀರನ್ನು ಶುದ್ಧೀಕರಿಸಿ ನೀಡುವಷ್ಟು ಸಾಮರ್ಥ್ಯ ಈಗಿನ ಶುದ್ಧೀಕರಣ ಘಟಕಕ್ಕೆ ಇಲ್ಲ. ಹೀಗಾಗಿ ಪೂರ್ತಿಯಾಗಿ ಶುದ್ಧೀಕರಣ ಮಾಡಿ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಪೂರ್ತಿ ಶುದ್ಧೀಕರಣ ಮಾಡಿ ಸರಬರಾಜು ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಆಗ ನೀರು ಸರಬರಾಜು ವ್ಯತ್ಯಯ ಆಗುವ ಸಾಧ್ಯತೆ ಇದೆ. ಜನರಿಗೆ ಸಮಸ್ಯೆ ಆಗಬಾರದು ಎಂದು ಶುದ್ಧೀಕರಣ ಘಟಕದ ಸಾಮರ್ಥ್ಯಕ್ಕೆ ತಕ್ಕಂತೆ ನೀರು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.