<p><strong>ಮಂಗಳೂರು: </strong>ನಿವೃತ್ತ ಪೊಲೀಸ್ ಅಧಿಕಾರಿ ಮಿತ್ರ ಹೆರಾಜೆ ನಗರದಲ್ಲಿ ಭಾನುವಾರ ತಡರಾತ್ರಿ ವಿರುದ್ಧದಿಕ್ಕಿನಲ್ಲಿ ವಾಹನ ಚಾಲನೆ ಮಾಡಿ ಅಪಘಾತ ಮಾಡಿದ್ದಾರೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವ ಶಂಕೆ ಇದ್ದು, ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪಗರಕರಣ ದಾಖಲಾಗಿದೆ.</p>.<p>ತಡರಾತ್ರಿ ಕದ್ರಿಯ ಸರ್ಕ್ಯೂಟ್ ಹೌಸ್ ನಿಂದ ಕಾರಿನಲ್ಲಿ ಬಂದ ಮಿತ್ರ ಹೆರಾಜೆ, ಬಟಗುಡ್ಡೆ ಜಂಕ್ಷನ್ ವರೆಗೂ ವಿರುದ್ಧ ದಿಕ್ಕಿನಲ್ಲಿ ಹೋಗಿದ್ದಾರೆ. ಆಗ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡಿದ್ದರು. ಕಾರನ್ನು ನಿಲ್ಲಿಸದೇ ಅದೇ ಮಾರ್ಗದಲ್ಲಿ ಮುಂದಕ್ಕೆ ಹೋಗಿದ್ದಾರೆ.</p>.<p>ಇದರಿಂದ ಕೆರಳಿದ ಸಾರ್ವಜನಿಕರು ಕಾರು ಅಡ್ಡಗಟ್ಟಿದ್ದಾರೆ. ಬೃಹತ್ ಪ್ರಮಾಣದಲ್ಲಿ ಜನರು ಸೇರಿದ್ದರು. ತಕ್ಷಣ ಸ್ಥಳಕ್ಕೆ ಬಂದ ಮಂಗಳೂರು ಪೂರ್ವ (ಕದ್ರಿ) ಠಾಣೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದ್ದಾರೆ.</p>.<p>ಮಿತ್ರ ಹೆರಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದರು. ವಿಚಾರಣೆ ಬಳಿಕ ಅವರನ್ನು ಕಳುಹಿಸಲಾಗಿದೆ. ಅವರ ವಿರುದ್ಧ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪಗರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಿತ್ರ ಹೆರಾಜೆ ಹೆಚ್ಚುವರಿ ಎಸ್ಪಿಯಾಗಿ ನಿವೃತ್ತಿ ಹೊಂದಿದ್ದರು. ಭಾನುವಾರ ರಾತ್ರಿ ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಸ್ಥಳದಲ್ಲಿದ್ದ ಜನರು ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ನಿವೃತ್ತ ಪೊಲೀಸ್ ಅಧಿಕಾರಿ ಮಿತ್ರ ಹೆರಾಜೆ ನಗರದಲ್ಲಿ ಭಾನುವಾರ ತಡರಾತ್ರಿ ವಿರುದ್ಧದಿಕ್ಕಿನಲ್ಲಿ ವಾಹನ ಚಾಲನೆ ಮಾಡಿ ಅಪಘಾತ ಮಾಡಿದ್ದಾರೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವ ಶಂಕೆ ಇದ್ದು, ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪಗರಕರಣ ದಾಖಲಾಗಿದೆ.</p>.<p>ತಡರಾತ್ರಿ ಕದ್ರಿಯ ಸರ್ಕ್ಯೂಟ್ ಹೌಸ್ ನಿಂದ ಕಾರಿನಲ್ಲಿ ಬಂದ ಮಿತ್ರ ಹೆರಾಜೆ, ಬಟಗುಡ್ಡೆ ಜಂಕ್ಷನ್ ವರೆಗೂ ವಿರುದ್ಧ ದಿಕ್ಕಿನಲ್ಲಿ ಹೋಗಿದ್ದಾರೆ. ಆಗ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡಿದ್ದರು. ಕಾರನ್ನು ನಿಲ್ಲಿಸದೇ ಅದೇ ಮಾರ್ಗದಲ್ಲಿ ಮುಂದಕ್ಕೆ ಹೋಗಿದ್ದಾರೆ.</p>.<p>ಇದರಿಂದ ಕೆರಳಿದ ಸಾರ್ವಜನಿಕರು ಕಾರು ಅಡ್ಡಗಟ್ಟಿದ್ದಾರೆ. ಬೃಹತ್ ಪ್ರಮಾಣದಲ್ಲಿ ಜನರು ಸೇರಿದ್ದರು. ತಕ್ಷಣ ಸ್ಥಳಕ್ಕೆ ಬಂದ ಮಂಗಳೂರು ಪೂರ್ವ (ಕದ್ರಿ) ಠಾಣೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದ್ದಾರೆ.</p>.<p>ಮಿತ್ರ ಹೆರಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದರು. ವಿಚಾರಣೆ ಬಳಿಕ ಅವರನ್ನು ಕಳುಹಿಸಲಾಗಿದೆ. ಅವರ ವಿರುದ್ಧ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪಗರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಿತ್ರ ಹೆರಾಜೆ ಹೆಚ್ಚುವರಿ ಎಸ್ಪಿಯಾಗಿ ನಿವೃತ್ತಿ ಹೊಂದಿದ್ದರು. ಭಾನುವಾರ ರಾತ್ರಿ ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಸ್ಥಳದಲ್ಲಿದ್ದ ಜನರು ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>