‘ಬಂಧನಕ್ಕೊಳಗಾಗಿರುವ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳನ್ನು ಗಾಂಜಾ ಸೇವನೆ ಪ್ರಕರಣದ ಆರೋಪಿಗಳಂತೆ ತೋರುತ್ತಿದ್ದು, ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 27 (ಬಿ) ಅಡಿ ಅವರ ವಿರುದ್ಧ ಕ್ರಮಕೈಗೊಳ್ಳಬಹುದು. ಹಾಗಾಗಿ ಜಾಮೀನು ಪಡೆಯಲು ಇವರು ಅರ್ಹರು’ ಎಂದು ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ವಿಶೇಷ ನ್ಯಾಯಾಧೀಶರೂ ಆಗಿರುವ ಎಂ.ರವೀಂದ್ರ ಜೋಷಿ ಅಭಿಪ್ರಾಯಪಟ್ಟಿದ್ದಾರೆ. ₹ 50 ಸಾವಿರ ಭದ್ರತಾ ಠೇವಣಿ ಪಡೆದು 13 ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಅವರು ಆದೇಶಿಸಿದ್ದಾರೆ.