ಶನಿವಾರ, ಏಪ್ರಿಲ್ 1, 2023
29 °C

ಗಾಂಜಾ ಪ್ರಕರಣ: ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಸೇರಿ 13 ಮಂದಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಗಾಂಜಾ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಗರ ವೈದ್ಯಕೀಯ ಕಾಲೇಜುಗಳ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳೂ ಸೇರಿದಂತೆ 13 ಆರೋಪಿಗಳಿಗೆ ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಎಂ.ರವೀಂದ್ರ ಜೋಷಿ ಅವರು ಶುಕ್ರವಾರ ಜಾಮೀನು ನೀಡಿದ್ದಾರೆ.

‘ಬಂಧನಕ್ಕೊಳಗಾಗಿರುವ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳನ್ನು ಗಾಂಜಾ ಸೇವನೆ ಪ್ರಕರಣದ ಆರೋಪಿಗಳಂತೆ ತೋರುತ್ತಿದ್ದು, ಎನ್‌ಡಿಪಿಎಸ್‌ ಕಾಯ್ದೆಯ ಸೆಕ್ಷನ್‌ 27 (ಬಿ) ಅಡಿ ಅವರ ವಿರುದ್ಧ ಕ್ರಮಕೈಗೊಳ್ಳಬಹುದು. ಹಾಗಾಗಿ ಜಾಮೀನು ಪಡೆಯಲು ಇವರು ಅರ್ಹರು’ ಎಂದು ಎನ್‌ಡಿಪಿಎಸ್‌ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ವಿಶೇಷ ನ್ಯಾಯಾಧೀಶರೂ ಆಗಿರುವ ಎಂ.ರವೀಂದ್ರ ಜೋಷಿ ಅಭಿಪ್ರಾಯಪಟ್ಟಿದ್ದಾರೆ. ₹ 50 ಸಾವಿರ ಭದ್ರತಾ  ಠೇವಣಿ ಪಡೆದು 13 ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಅವರು ಆದೇಶಿಸಿದ್ದಾರೆ.

ನಿಷೇಧಿತ ಪದಾರ್ಥ ಗಾಂಜಾವನ್ನು ಅಕ್ರಮವಾಗಿ ಹೊಂದಿದ್ದ ಹಾಗೂ ಸೇವನೆ ಮಾಡಿದ ಆರೋಪದ ಮೇರೆಗೆ ನಾಲ್ವರು ವೈದ್ಯರು 18 ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 24 ಆರೋಪಿಗಳನ್ನು ನಗರದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.

ಬಂಧನಕ್ಕೊಳಗಾಗಿರುವ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು (22 ಮಂದಿ) ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 439ರ ಅಡಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಒಟ್ಟು 13 ಮಂದಿಗೆ ಜಾಮೀನು ಸಿಕ್ಕಿದೆ. ಅನಿವಾಸಿ ಭಾರತೀಯ ನೀಲ್‌ ಕಿಶೋರಿಲಾಲ್‌ ರಾಮ್‌ಜಿ ಷಾ ಒಂದನೇ ಆರೋಪಿಯಾಗಿದ್ದು, ಅತನಿಗೆ ಜಾಮೀನು ಸಿಕ್ಕಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು