'ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ'ಗೆ ಕುಂದಾಪುರದ ಗೋಪಾಲ ಆಚಾರ್ಯ ತೀರ್ಥಹಳ್ಳಿ ಹಾಗೂ ಬೇಲ್ತೂರು ರಮೇಶ್, ಉಡುಪಿಯ ಆವರ್ಸೆ ಶ್ರೀನಿವಾಸ ಮಡಿವಾಳ, ಮಂಗಳೂರಿನ ಹರಿನಾರಾಯಣ ಬೈಪಡಿತ್ತಾಯ ಹಾಗೂ ಸಂಜಯ್ ಕುಮಾರ್ ಶೆಟ್ಟಿ, ಶಿರಸಿಯ ಎಂ.ಆರ್. ಹೆಗಡೆ ಕಾನಗೋಡ, ಕುಂದಾಪುರದ ಸುಬ್ರಹ್ಮಣ್ಯ ಧಾರೇಶ್ವರ, ಬಂಟ್ವಾಳದ ವಿಟ್ಲ ಶಂಭು ಶರ್ಮ, ಶಿರಾ ತಾಲ್ಲೂಕು ಬರಗೂರಿನ ಹನುಮಂತರಾಯಪ್ಪ ಮತ್ತು ಕೋಲಾರ ತಾಲ್ಲೂಕಿನ ವಕ್ಕಲೇರಿಯ ಎ.ಎಂ. ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಪುರಸ್ಕಾರ ಹೊಂದಿದೆ.