ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಂತರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ

Last Updated 4 ಆಗಸ್ಟ್ 2020, 6:16 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.

ಘಾಟ್‌ನ ಎರಡನೇ ತಿರುವಿನಲ್ಲಿ ಮಂಗಳವಾರ ಮರವೊಂದು ರಸ್ತೆಗೆ ಬಿದ್ದಿದೆ. ಸೋಮವಾರ ರಾತ್ರಿ ಘಾಟ್‌ನ ಕೆಲವೆಡೆ ಭೂಕುಸಿತ ಉಂಟಾಗಿತ್ತು. ಕೂಡಲೇ ತೆರವು ಕಾರ್ಯಾಚರಣೆ ನಡೆಯಿತು.

ರಾತ್ರಿ‌ ವೇಳೆ‌ ವಾಹನ‌ ಸಂಚಾರ ನಿಷೇಧಿಸಿರುವುದರಿಂದ ಯಾವುದೇ ಅನಾಹುತ ಆಗಿಲ್ಲ.

ಪುತ್ತೂರು ತಾಲ್ಲೂಕಿನಲ್ಲಿ 9.6 ಸೆಂ.ಮೀ, ಬೆಳ್ತಂಗಡಿ ತಾಲ್ಲೂಕಿನಲ್ಲಿ 9.2 ಸೆಂ.ಮೀ. ಮಳೆ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT