‘ಎಂಆರ್ಪಿಎಲ್, ಬಿಎಎಸ್ಎಫ್, ಎಚ್ಪಿಸಿಎಲ್ನಂತಹ ದೊಡ್ಡ ಕೈಗಾರಿಗಳಿಗೆ ಹಾಗೂ ಎಸ್ಇಜೆಡ್ ಪ್ರದೇಶಕ್ಕೆ ಸಂಚರಿಸುವ ಭಾರಿ ವಾಹನಗಳು ಈ ರಸ್ತೆಯನ್ನು ಬೇಕಾಬಿಟ್ಟಿ ಬಳಸುತ್ತಿರುವುದೇ ಈ ರಸ್ತೆ ಹದಗೆಡಲು ಕಾರಣ. 2016ರಲ್ಲಿ ಡಿವೈಎಫ್ಐ ನೇತೃತ್ವದ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರು ಹೋರಾಟ ಮಾಡಿದ ಪ್ರತಿಫಲವಾಗಿ ಸುರತ್ಕಲ್ನಿಂದ ಎಂಆರ್ಪಿಎಲ್ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹ 60 ಕೋಟಿ ಬಿಡುಗಡೆ ಮಾಡಿತ್ತು. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿತ್ತು. ಆದರೆ, ರಾಜಕೀಯ ಕಾರಣಕ್ಕಾಗಿ ಟೆಂಡರ್ ರದ್ದುಗೊಳಿಸಲಾಯಿತು. ಮಹಾ ನಗರಪಾಲಿಕೆ ಇದುವರೆಗೂ ಈ ರಸ್ತೆಯ ಅಭಿವೃದ್ಧಿ ಮಾಡಿಲ್ಲ. ಕೇವಲ ತೇಪೆ ಕೆಲಸಕ್ಕೆ ಕೋಟ್ಯಂತರ ರೂಪಾಯಿ ವ್ಯರ್ಥ ಮಾಡಿದೆ’ ಎಂದು ಡಿವೈಎಫ್ಐ ಆರೋಪಿಸಿದೆ.