ವಿ.ವಿ ರಸ್ತೆಯ ಅಭಿವೃದ್ಧಿ ಕಾರ್ಯ ಹಂತಹಂತವಾಗಿ ನಡೆಯುತ್ತಿದೆ. ಕೆಲವೆಡೆ ಸಮರ್ಪಕ ಚರಂಡಿ ಇಲ್ಲದೆ ರಸ್ತೆ ಹೊಂಡಮಯವಾಗಿದೆ. ಮಳೆಗಾಲ ಮುಗಿದರೂ ಹೊಂಡ ಮುಚ್ಚುವ ಕಾರ್ಯಕ್ಕೆ ಗುತ್ತಿಗೆದಾರರು ಮುಂದಾಗಿಲ್ಲ. ವರ್ಷದೊಳಗೆ ರಸ್ತೆ ಹದಗೆಟ್ಟಿರುವುದರ ಹಿಂದೆ ಎಷ್ಟು ಭ್ರಷ್ಟಾಚಾರ ನಡೆದಿದೆ ಅನ್ನುವುದನ್ನು ಭಿತ್ತಿಪತ್ರದಲ್ಲಿ ಬರೆದು ರಸ್ತೆಬದಿ ಇರಿಸಲಾಗಿದೆ.