ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ - ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.
ಸುಳ್ಯ ತಾಲ್ಲೂಕಿನ ಕಲ್ಮಕಾರು ಹಾಗೂ ಕಲ್ಲುಗುಂಡಿ ಪರಿಸರದಲ್ಲಿ ಭಾನುವಾರ ಸಂಜೆ ವೇಳೆ ಭೂಮಿ ಕಂಪಿಸಿದ ಬಗ್ಗೆ ಸ್ಥಳೀಯ ಜನರು ಮಾಹಿತಿ ನೀಡಿದ್ದಾರೆ.
ಕಲ್ಮಕಾರು ಪರಿಸರದಲ್ಲಿ ಸಂಜೆ ಅಂದಾಜು 6.30ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ. ತಾಲೂಕಿನ ಕಲ್ಮಕಾರು, ಮೆಂಟೆಕಜೆ, ಗುಳಿಕ್ಕಾನ ಪ್ರದೇಶದಲ್ಲಿ ಕಂಪನ ಅನುಭವವಾಗಿದೆ. ಉಂಟಾದ ಶಬ್ದ ಕೊಲ್ಲಮೊಗ್ರದವರೆಗೆ ಕೇಳಿರುವುದಾಗಿ ತಿಳಿದು ಬಂದಿದೆ.