<p><strong>ಪುತ್ತೂರು: </strong>ನಗರದ ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ನಡೆದ ಆಹ್ವಾನಿತ ಅಂತರಕಾಲೇಜು ಎಕನಾಮಿಕ್ಸ್ ಫೆಸ್ಟ್ 'ಎಕಾಕ್ಸೆನಿತ್-2020' ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.</p>.<p>ಮಂಗಳೂರು ವಿಶ್ವಿದ್ಯಾಲಯದ ಅಧೀನಕ್ಕೊಳಪಡುವ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ಆಹ್ವಾನಿತ 19 ಪದವಿ ಕಾಲೇಜುಗಳ ಅರ್ಥಶಾಸ್ತ್ರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>'ಪರಿಸರ ಉಳಿಸಿ' ಕುರಿತು ಟೀಶರ್ಟ್ ಪೈಂಟಿಂಗ್ನಲ್ಲಿ ಪುತ್ತೂರಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ, ಕೇಂದ್ರ ಬಜೆಟ್ ಕುರಿತ `ಯೂನಿಯನ್ ಬಜೆಟ್ ಅಂಡ್ ಇಂಡಿಯಾ ಇನ್ 2020' ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತ ರಸಪ್ರಶ್ನೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿವೆ.</p>.<p>ಮೋಕ್ ಪ್ರೆಸ್ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿ ಪಥಮ ದರ್ಜೆ ಕಾಲೇಜು ಪ್ರಥಮ , ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, `ಗ್ರೀನ್ ಸಿಟಿ-ಕ್ಲೀನ್ ಸಿಟಿ' ಕುರಿತ ಮಾದರಿ ತಯಾರಿ ಸ್ಪರ್ಜೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, ‘ಇಕೋ-ಫ್ಯಾಶನ್ ಶೋ’ ಸ್ಪರ್ಧೆಯಲ್ಲಿ ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಥಮ ಮತ್ತು ವಿವೇಕಾನಂದ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ನಗರದ ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ನಡೆದ ಆಹ್ವಾನಿತ ಅಂತರಕಾಲೇಜು ಎಕನಾಮಿಕ್ಸ್ ಫೆಸ್ಟ್ 'ಎಕಾಕ್ಸೆನಿತ್-2020' ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.</p>.<p>ಮಂಗಳೂರು ವಿಶ್ವಿದ್ಯಾಲಯದ ಅಧೀನಕ್ಕೊಳಪಡುವ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ಆಹ್ವಾನಿತ 19 ಪದವಿ ಕಾಲೇಜುಗಳ ಅರ್ಥಶಾಸ್ತ್ರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>'ಪರಿಸರ ಉಳಿಸಿ' ಕುರಿತು ಟೀಶರ್ಟ್ ಪೈಂಟಿಂಗ್ನಲ್ಲಿ ಪುತ್ತೂರಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ, ಕೇಂದ್ರ ಬಜೆಟ್ ಕುರಿತ `ಯೂನಿಯನ್ ಬಜೆಟ್ ಅಂಡ್ ಇಂಡಿಯಾ ಇನ್ 2020' ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತ ರಸಪ್ರಶ್ನೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿವೆ.</p>.<p>ಮೋಕ್ ಪ್ರೆಸ್ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿ ಪಥಮ ದರ್ಜೆ ಕಾಲೇಜು ಪ್ರಥಮ , ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, `ಗ್ರೀನ್ ಸಿಟಿ-ಕ್ಲೀನ್ ಸಿಟಿ' ಕುರಿತ ಮಾದರಿ ತಯಾರಿ ಸ್ಪರ್ಜೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವಿತೀಯ, ‘ಇಕೋ-ಫ್ಯಾಶನ್ ಶೋ’ ಸ್ಪರ್ಧೆಯಲ್ಲಿ ಕಲ್ಲಡ್ಕದ ಅನುಗ್ರಹ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಥಮ ಮತ್ತು ವಿವೇಕಾನಂದ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>