<p><strong>ಉಪ್ಪಿನಂಗಡಿ</strong>: ‘ನಮ್ಮಲ್ಲಿ ಇದೀಗ ವಿದ್ಯಾವಂತರಾಗುತ್ತಾರೆ, ವಿಚಾರವಂತರಾಗುತ್ತಾರೆ. ಆದರೆ, ಆಚಾರವಂತರಾಗುತ್ತಿಲ್ಲ. ಇದು ವಿಷಾದನೀಯ’ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಹೇಳಿದರು.</p>.<p>ಬಜತ್ತೂರು ಗ್ರಾಮದ ಕಾಂಚನದಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಡಳಿತದ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯೆ ಇದ್ದರೆ ಎಲ್ಲಿಯೂ ಬದುಕಬಹುದು. ಆದರೆ ಆಚಾರ ಇಲ್ಲದ ಬದುಕು ಸಾರ್ಥಕ ಆಗಲಾರದು. ಕಾಂಚನ ಸಂಗೀತ ಮನೆತನದ ವೆಂಕಟಕೃಷ್ಣ ಅಯ್ಯರ್ ಅವರು 1954ರಲ್ಲಿ ನಿರ್ಮಿಸಿದ ಈ ಶಾಲೆಯನ್ನು ಅವರ ಕುಟುಂಬದವರಿಗೆ ಮುಂದುವರಿಸಲು ಸಮಸ್ಯೆ ಉಂಟಾದ ಕಾರಣ 2007ರಲ್ಲಿ ಧರ್ಮಸ್ಥಳ ಸಂಸ್ಥೆಗೆ ನೀಡಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಇಲ್ಲಿನ ಕೊರತೆ ನೀಗಿಸಲು ₹1.80 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂದರು.</p>.<p>ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ವಿದ್ಯಾದಾನ ಶ್ರೇಷ್ಠವಾದ ದಾನವಾಗಿದ್ದು, ಶಿಕ್ಷಣ ಬದುಕಿನ ಕೊನೆಯವರೆಗೂ ಇರುವ ಮತ್ತು ಕದಿಯಲಾರದ ವಸ್ತುವಾಗಿರುತ್ತದೆ. ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರ ಇರಿಸಿದರೆ ವಿದ್ಯಾರ್ಥಿಗಳಿಂದ ಮತ್ತಷ್ಟು ಸಾಧನೆ ನೀರೀಕ್ಷಿಸಬಹುದಾಗಿದೆ ಎಂದರು.</p>.<p>ಶಾಲೆಯ ಸಂಸ್ಥಾಪಕಿ ರೋಹಿಣಿ ಸುಬ್ಬರತ್ನಂ ಮಾತನಾಡಿ, ಶಾಲಾ ಸ್ಥಾಪನೆ ಮತ್ತು ಅದರ ಬಳಿಕ ಎದುರಿಸುತ್ತಿದ್ದ ಸಮಸ್ಯೆಗಳನ್ನು ಮನಗಂಡು ಧರ್ಮಸ್ಥಳ ಸಂಸ್ಥೆಯವರನ್ನು ಕೇಳಿಕೊಂಡಿದ್ದು, ಇದೀಗ ಶಾಲೆ ಅಭಿವೃದ್ಧಿ ಹೊಂದುತ್ತಿರುವುದು ಸಂತೋಷ ತಂದಿದೆ ಎಂದರು.</p>.<p>ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಮಧುಶ್ರೀ ಯಾದವ ಗೌಡ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಮೇಶ್ ಮಯ್ಯ, ಕಟ್ಟಡ ಕಾಮಗಾರಿಯ ಎಂಜಿನಿಯರ್ ಯಶೋಧರ, ಗುತ್ತಿಗೆದಾರ ಅಬ್ದುಲ್ಲ ಭಾಗವಹಿಸಿದ್ದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್.ಸ್ವಾಗತಿಸಿ, ಮುಖ್ಯ ಶಿಕ್ಷಕ ಎ.ಲಕ್ಷ್ಮಣ ಗೌಡ ವಂದಿಸಿದರು. ಉಪನ್ಯಾಸಕ ಮೋಹನಚಂದ್ರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ</strong>: ‘ನಮ್ಮಲ್ಲಿ ಇದೀಗ ವಿದ್ಯಾವಂತರಾಗುತ್ತಾರೆ, ವಿಚಾರವಂತರಾಗುತ್ತಾರೆ. ಆದರೆ, ಆಚಾರವಂತರಾಗುತ್ತಿಲ್ಲ. ಇದು ವಿಷಾದನೀಯ’ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಹೇಳಿದರು.</p>.<p>ಬಜತ್ತೂರು ಗ್ರಾಮದ ಕಾಂಚನದಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಡಳಿತದ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯೆ ಇದ್ದರೆ ಎಲ್ಲಿಯೂ ಬದುಕಬಹುದು. ಆದರೆ ಆಚಾರ ಇಲ್ಲದ ಬದುಕು ಸಾರ್ಥಕ ಆಗಲಾರದು. ಕಾಂಚನ ಸಂಗೀತ ಮನೆತನದ ವೆಂಕಟಕೃಷ್ಣ ಅಯ್ಯರ್ ಅವರು 1954ರಲ್ಲಿ ನಿರ್ಮಿಸಿದ ಈ ಶಾಲೆಯನ್ನು ಅವರ ಕುಟುಂಬದವರಿಗೆ ಮುಂದುವರಿಸಲು ಸಮಸ್ಯೆ ಉಂಟಾದ ಕಾರಣ 2007ರಲ್ಲಿ ಧರ್ಮಸ್ಥಳ ಸಂಸ್ಥೆಗೆ ನೀಡಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಇಲ್ಲಿನ ಕೊರತೆ ನೀಗಿಸಲು ₹1.80 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂದರು.</p>.<p>ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ವಿದ್ಯಾದಾನ ಶ್ರೇಷ್ಠವಾದ ದಾನವಾಗಿದ್ದು, ಶಿಕ್ಷಣ ಬದುಕಿನ ಕೊನೆಯವರೆಗೂ ಇರುವ ಮತ್ತು ಕದಿಯಲಾರದ ವಸ್ತುವಾಗಿರುತ್ತದೆ. ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರ ಇರಿಸಿದರೆ ವಿದ್ಯಾರ್ಥಿಗಳಿಂದ ಮತ್ತಷ್ಟು ಸಾಧನೆ ನೀರೀಕ್ಷಿಸಬಹುದಾಗಿದೆ ಎಂದರು.</p>.<p>ಶಾಲೆಯ ಸಂಸ್ಥಾಪಕಿ ರೋಹಿಣಿ ಸುಬ್ಬರತ್ನಂ ಮಾತನಾಡಿ, ಶಾಲಾ ಸ್ಥಾಪನೆ ಮತ್ತು ಅದರ ಬಳಿಕ ಎದುರಿಸುತ್ತಿದ್ದ ಸಮಸ್ಯೆಗಳನ್ನು ಮನಗಂಡು ಧರ್ಮಸ್ಥಳ ಸಂಸ್ಥೆಯವರನ್ನು ಕೇಳಿಕೊಂಡಿದ್ದು, ಇದೀಗ ಶಾಲೆ ಅಭಿವೃದ್ಧಿ ಹೊಂದುತ್ತಿರುವುದು ಸಂತೋಷ ತಂದಿದೆ ಎಂದರು.</p>.<p>ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಮಧುಶ್ರೀ ಯಾದವ ಗೌಡ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಮೇಶ್ ಮಯ್ಯ, ಕಟ್ಟಡ ಕಾಮಗಾರಿಯ ಎಂಜಿನಿಯರ್ ಯಶೋಧರ, ಗುತ್ತಿಗೆದಾರ ಅಬ್ದುಲ್ಲ ಭಾಗವಹಿಸಿದ್ದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್.ಸ್ವಾಗತಿಸಿ, ಮುಖ್ಯ ಶಿಕ್ಷಕ ಎ.ಲಕ್ಷ್ಮಣ ಗೌಡ ವಂದಿಸಿದರು. ಉಪನ್ಯಾಸಕ ಮೋಹನಚಂದ್ರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>